ದೇಶ- ವಿದೇಶ

ಪುಲ್ವಾಮಾ ದಾಳಿ 7 ವರ್ಷ : ಹುತಾತ್ಮರಿಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ನಮನ

ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಸಿಬ್ಬಂದಿಗೆ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ಶನಿವಾರ ನಮನ ಸಲ್ಲಿಸಿದರು.

ಕರಾಳ ದಿನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, “2019ರ ಈ ದಿನ ಪುಲ್ವಾಮಾದಲ್ಲಿ ತಮ್ಮ ಜೀವ ತ್ಯಜಿಸಿದ ಧೈರ್ಯಶಾಲಿ ವೀರರನ್ನು ನೆನಪಿಸಿಕೊಳ್ಳುತ್ತೇವೆ. ಅವರ ಭಕ್ತಿ, ನಿಶ್ಚಯ ಮತ್ತು ರಾಷ್ಟ್ರ ಸೇವೆ ನಮ್ಮ ಸಾಮೂಹಿಕ ಜಾಗೃತಿಯಲ್ಲಿ ಶಾಶ್ವತವಾಗಿ ನೆರಳಾಗಿವೆ. ಪ್ರತಿ ಭಾರತೀಯ ಅವರ ಸಾಹಸದಿಂದ ಬಲ ಪಡೆಯುತ್ತಾನೆ”. ಹುತಾತ್ಮರ ಸಾಹಸವು ಶಾಶ್ವತವಾಗಿ ನಮ್ಮ ಸ್ಮರಣೆಯಲ್ಲಿ ಉಳಿದಿದೆ ಎಂದು ಅವರು ಬರೆದುಕೊಂಡಿದ್ದಾರೆ.

ಉಪರಾಷ್ಟ್ರಪತಿ ರಾಧಾಕೃಷ್ಣನ್‌, ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೂ ಸೇರಿದಂತೆ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಪುಲ್ವಾಮಾದ ಲೆಥ್ಪೊರದಲ್ಲಿ (ಅವಾಂತಿಪೋರಾ ಬಳಿ) ಸ್ಮಾರಕ ಸ್ಥಳದಲ್ಲಿ ಪುಷ್ಪಗುಚ್ಛ ಅರ್ಪಣೆ, ಪ್ರಾರ್ಥನೆ ಮತ್ತು ಸ್ಮರಣ ಸಭೆಗಳು ನಡೆದವು. CRPF ಮತ್ತು ಇತರ ಭದ್ರತಾ ಪಡೆಗಳು ತಮ್ಮ ಸಹೋದ್ಯೋಗಿಗಳ ಸ್ಮರಣಾರ್ಥ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿದ್ದವು.

2019ರ ಫೆಬ್ರವರಿ 14ರಂದು ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ CRPF ಕಾನ್ವಾಯ್‌ಗೆ ಜೈಷ್-ಎ-ಮೊಹಮ್ಮದ್ ಸಂಘಟನೆಯ ಆತ್ಮಾಹುತಿ ಬಾಂಬರ್ ಆದಿಲ್ ಅಹ್ಮದ್ ದಾರ್ ಮಾರುತಿ ಇಕೋ ಕಾರ್‌ನಲ್ಲಿ ಬಾಂಬ್ ಸ್ಫೋಟ ಮಾಡಿದ್ದ. ಇದು ಭಾರತದ ಇತ್ತೀಚಿನ ದಶಕಗಳಲ್ಲಿಯೇ ಅತ್ಯಂತ ಭಯಾನಕ ಭಯೋತ್ಪಾದಕ ದಾಳಿಗಳಲ್ಲಿ ಒಂದಾಗಿತ್ತು. ದಾಳಿಯ ನಂತರ ಭಾರತವು ಫೆಬ್ರವರಿ 26ರಂದು ಬಾಲಾಕೋಟ್‌ನಲ್ಲಿ ವಾಯುದಾಳಿ ನಡೆಸಿ ಪ್ರತೀಕಾರ ತೀರಿಸಿಕೊಂಡಿತ್ತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

18 mins ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

25 mins ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

5 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

5 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

6 hours ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

7 hours ago