Operation Akhal Three more terrorists killed
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.
ಅಮೃತಸರ ಗ್ರಾಮೀಣ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಐಎಸ್ಐ ಬೆಂಬಲಿತ ಭಯೋತ್ಪಾದನೆ ಮತ್ತು ಗಡಿ ದಾಟಿದ ಶಸ್ತ್ರಾಸ್ತ್ರ ಕಳ್ಳಸಾಗಣೆ ಕೃತ್ಯವನ್ನು ತಡೆದಂತಾಗಿದೆ ಎಂದು ಪಂಜಾಬ್ ಡಿಜಿಪಿ ಗೌರವ್ ಯಾದವ್ ತಿಳಿಸಿದ್ದಾರೆ.
ಬಂಧಿತರು ಗುರ್ಸೇವಕ್ ಸಿಂಗ್ ಅಲಿಯಾಸ್ ಸೂರಜ್ ಮತ್ತು ಅಮರಜೀತ್ ಸಿಂಗ್ ಅಲಿಯಾಸ್ ರೋಹಿತ್ ಎಂದು ಗುರುತಿಸಲಾಗಿದೆ. ಅವರಿಂದ ಒಂದು ಎಕೆ-47 ರೈಫಲ್ (2 ಮ್ಯಾಗಜೀನ್ಗಳು ಮತ್ತು 36 ಸಜೀವ ಗುಂಡುಗಳೊಂದಿಗೆ), ಮೂರು ಗ್ಲಾಕ್ 9ಎಂಎಂ ಪಿಸ್ತೂಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಶಂಕಿತರು ಸಾಮಾಜಿಕ ಜಾಲತಾಣಗಳ ಮೂಲಕ ವಿದೇಶಿಗರೊಂದಿಗೆ ಸಂಪರ್ಕದಲ್ಲಿದ್ದರು. ಘಟಕವು ಭಾರತ ವಿರೋಧಿ ಮತ್ತು ಪೊಲೀಸ್ ವಿರೋಧಿ ಪ್ರಚಾರದಲ್ಲೂ ಭಾಗಿಯಾಗಿತ್ತು ಎಂದು ತಿಳಿದುಬಂದಿದೆ. ಘರಿಂಡಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಇಡೀ ನೆಟ್ವರ್ಕ್ ಅನ್ನು ಬಹಿರಂಗಗೊಳಿಸಲು ತನಿಖೆ ಮುಂದುವರೆದಿದೆ.
ಇದಕ್ಕೂ ಮುನ್ನ ಜನವರಿ 1, 2026ರಂದು ಹಿಮಾಚಲ ಪ್ರದೇಶದ ನಲಗಢ ಪೊಲೀಸ್ ಠಾಣೆಯಲ್ಲಿ ನಡೆದ ಆರ್ಡಿಎಕ್ಸ್ ಆಧಾರಿತ ಐಇಡಿ ಸ್ಫೋಟ ಪ್ರಕರಣದಲ್ಲಿ ಭಾಗಿಯಾದ ಇಬ್ಬರನ್ನು ಫೆಬ್ರವರಿ 22ರಂದು ಬಂಧಿಸಲಾಗಿತ್ತು. ಆ ಪ್ರಕರಣದಲ್ಲೂ ವಿದೇಶಿ ಮಾರ್ಗದರ್ಶನದ ಸೂಚನೆಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…