Mysore
30
clear sky

Social Media

ಸೋಮವಾರ, 23 ಫೆಬ್ರವರಿ 2026
Light
Dark

ಕರ್ನಾಟಕದ ತೊಗಲುಗೊಂಬೆ ಕಲಾವಿದೆ ಭೀಮವ್ವಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

Bhimavva puppeteer PadmaShri

ನವದೆಹಲಿ: ಕರ್ನಾಟಕದ ತೊಗಲುಗೊಂಬೆ (Puppeteer) ಕಲಾವಿದೆ ಭೀಮವ್ವಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಶ್ರೀ ಪ್ರಶಸ್ತಿ (Padmashree Award) ಪ್ರದಾನ ಮಾಡಿದರು.

ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭೀಮವ್ವ ಶಿಳ್ಳೆಕ್ಯಾತರ್‌ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.

ಇದನ್ನೂ ಓದಿ:- Padma Awards ; ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ಬಾಲ್ಯದಿಂದಲೇ ಈ ಕಲೆಯಲ್ಲಿ ತೊಡಗಿಸಿಕೊಂಡಿರುವ ಭೀಮವ್ವ ಅವರು, ರಾಜ್ಯ ಮಾತ್ರವಲ್ಲ ದೇಶ-ವಿದೇಶಗಳಲ್ಲಿ ಈ ಕಲೆಯನ್ನು ಪ್ರದರ್ಶಿಸಿ ಪ್ರಶಂಸೆ ಪಡೆದಿದ್ದಾರೆ.

1929ರಲ್ಲಿ ಕೊಪ್ಪಳ ತಾಲ್ಲೂಕಿನ ಮೋರನಾಳ ಗ್ರಾಮದಲ್ಲಿ ಜನಿಸಿದ್ದ ಭೀಮವ್ವ ಅವರು, ತಮ್ಮ 14ನೇ ವಯಸ್ಸಿನಿಂದ ಇಲ್ಲಿಯವರೆಗೂ ತೊಗಲುಗೊಂಬೆಯಾಟವನ್ನು ಕುಲ ಕಸುಬಾಗಿ ಮಾಡುತ್ತಾ ಬಂದಿದ್ದಾರೆ.

Tags:
error: Content is protected !!