Bhimavva puppeteer PadmaShri
ನವದೆಹಲಿ: ಕರ್ನಾಟಕದ ತೊಗಲುಗೊಂಬೆ (Puppeteer) ಕಲಾವಿದೆ ಭೀಮವ್ವಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಶ್ರೀ ಪ್ರಶಸ್ತಿ (Padmashree Award) ಪ್ರದಾನ ಮಾಡಿದರು.
ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭೀಮವ್ವ ಶಿಳ್ಳೆಕ್ಯಾತರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.
ಇದನ್ನೂ ಓದಿ:- Padma Awards ; ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ
ಬಾಲ್ಯದಿಂದಲೇ ಈ ಕಲೆಯಲ್ಲಿ ತೊಡಗಿಸಿಕೊಂಡಿರುವ ಭೀಮವ್ವ ಅವರು, ರಾಜ್ಯ ಮಾತ್ರವಲ್ಲ ದೇಶ-ವಿದೇಶಗಳಲ್ಲಿ ಈ ಕಲೆಯನ್ನು ಪ್ರದರ್ಶಿಸಿ ಪ್ರಶಂಸೆ ಪಡೆದಿದ್ದಾರೆ.
1929ರಲ್ಲಿ ಕೊಪ್ಪಳ ತಾಲ್ಲೂಕಿನ ಮೋರನಾಳ ಗ್ರಾಮದಲ್ಲಿ ಜನಿಸಿದ್ದ ಭೀಮವ್ವ ಅವರು, ತಮ್ಮ 14ನೇ ವಯಸ್ಸಿನಿಂದ ಇಲ್ಲಿಯವರೆಗೂ ತೊಗಲುಗೊಂಬೆಯಾಟವನ್ನು ಕುಲ ಕಸುಬಾಗಿ ಮಾಡುತ್ತಾ ಬಂದಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…