ದೇಶ- ವಿದೇಶ

ಪುರಿ ಜಗನ್ನಾಥನ ರತ್ನ ಭಂಡಾರ ಓಪನ್:‌ 46 ವರ್ಷಗಳ ಬಳಿಕ ಅಲ್ಲಿ ಸಿಕ್ಕಿದ್ದೇನು ಗೊತ್ತಾ.?

ಒಡಿಶಾ: ಪುರಾಣ ಪ್ರಸಿದ್ಧ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರ್‌ ಓಪನ್‌ ಮಾಡಲಾಗಿದೆ.

ಬರೋಬ್ಬರಿ 46 ವರ್ಷಗಳ ಬಳಿಕ ರತ್ನಗಳ ಭಂಡಾರವನ್ನು ಸೂಕ್ತ ಭದ್ರತೆ ಮತ್ತು ಧಾರ್ಮಿಕ ಕಾರ್ಯದ ಜೊತೆ ತೆರೆಯಲಾಗಿದೆ. 1978ರಲ್ಲಿ ಭಂಡಾರದ ಕೊಠಡಿ ತೆರೆಯಲಾಗಿತ್ತು. ಇದಾದ ನಂತರ ಕೊಠಡಿ ತೆರೆದಿರಲಿಲ್ಲ. ಇದೀಗ ನಕಲಿ ಕೀಲಿ ಕೈ ಬಳಸಿ ಇಂದು ಭಂಡಾರವನ್ನು ಓಪನ್‌ ಮಾಡಲಾಗಿದೆ. ನಿರೀಕ್ಷೆಯಂತೆಯೇ ರತ್ನ ಭಂಡಾರದೊಳಗೆ ಚಿನ್ನಾಭರಣಗಳಿರುವ 15 ಪೆಟ್ಟಿಗೆ ಸೇರಿದಂತೆ ಅತ್ಯಮೂಲ್ಯ ಸಂಪತ್ತು ಸಿಕ್ಕಿದೆ ಎನ್ನಲಾಗಿದೆ.

ಮೊದಲಿಗೆ ಬಾಗಿಲು ಓಪನ್‌ ಮಾಡುವುದಕ್ಕೂ ಮುನ್ನ ಜಗನ್ನಾಥನಿಗೆ ಪೂಜೆ ಸಲ್ಲಿಸಿ, ಆಡಳಿತ ಮಂಡಳಿ ಸದಸ್ಯರು ರತ್ನ ಭಂಡಾರದ ಬಾಗಿಲು ತೆರೆದರು.

ಈ ಹಿಂದೆ 1978ರಲ್ಲಿ ಪುರಿ ಜಗನ್ನಾಥನ ರತ್ನ ಭಂಡಾರ ಓಪನ್‌ ಮಾಡಲಾಗಿತ್ತು. ಇದೀಗ ಬರೋಬ್ಬರಿ 46 ವರ್ಷಗಳ ಬಳಿಕ ರತ್ನ ಭಂಡಾರವನ್ನು ಮತ್ತೊಮ್ಮೆ ತೆರೆಯಲಾಗಿದೆ. ರತ್ನ ಭಂಡಾರದ ಬಾಗಿಲು ಓಪನ್‌ ಮಾಡಿದ ಬಳಿಕ ಶಿಫ್ಟಿಂಗ್‌ ಸ್ಟ್ರಾಂಗ್‌ ರೂಮ್‌ಗೆ ರತ್ನಭಂಡಾರ ರವಾನೆ ಮಾಡಲಾಗಿದೆ. ಬೆಲೆಬಾಳುವ ರತ್ನ ಭಂಡಾರಕ್ಕೆ ಬಿಗಿ ಭದ್ರತೆಯನ್ನೂ ಸಹ ಒದಗಿಸಲಾಗಿದೆ.

ಕಾರ್ಯಾಚರಣೆ ವಿಡಿಯೋ ಗೌಪ್ಯತೆ ಕಾಪಾಡಲಾಗುತ್ತೆ. ದಾಖಲೆಗಾಗಿ ಕಾರ್ಯಾಚರಣೆ ವಿಡಿಯೋ ರೆಕಾರ್ಡ್‌ ಮಾಡಲಾಗಿದ್ದು, ದೇಗುಲದ ಪ್ರತಿನಿಧಿಗಳು, ಅಧಿಕಾರಿಗಳು ಭಾಗಿಯಾಗಿದ್ದರು. ಸ್ಟ್ಯಾಂಡರ್ಡ್‌ ಆಪರೇಟಿಂಗ್‌ ಕಾರ್ಯವಿಧಾನ ಮಾರ್ಗಸೂಚಿಯಂತೆ ಬಾಗಿಲು ಓಪನ್‌ ಮಾಡಲಾಗಿದೆ.

ಇನ್ನು ಪುರಿ ಜಗನ್ನಾಥನ ರತ್ನ ಭಂಡಾರದಲ್ಲಿ ಅಪಾರ ಪ್ರಮಾಣದ ಸಂಪತ್ತು ಸಿಕ್ಕಿದೆ ಎನ್ನಲಾಗಿದೆ. ಚಿನ್ನಾಭರಣಗಳಿರುವ 9 ಅಡಿ ಅಗಲ ಮತ್ತು 3 ಅಡಿ ಎತ್ತರದ ಪೆಟ್ಟಿಗೆ, 128 ಕೆಜಿ ತೂಕದ 454 ಚಿನ್ನದ ಆಭರಣಗಳು, 221 ಕೆಜಿ ತೂಕದ 293 ಬೆಳ್ಳಿ ಆಭರಣಗಳು ಭಂಡಾರದಲ್ಲಿ ಸಿಕ್ಕಿವೆ. ಇನ್ನು 12,800ಕ್ಕೂ ಹೆಚ್ಚು ರತ್ನಖಚಿತ ಆಭರಣಗಳು, ಅಮೂಲ್ಯ ಹರಳುಗಳು, 22 ಸಾವಿರಕ್ಕೂ ಹೆಚ್ಚು ಬೆಳ್ಳಿ ವಸ್ತುಗಳು ಸಿಕ್ಕಿವೆ ಎಂಬ ಮಾಹಿತಿ ಲಭ್ಯವಾಗಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago