ದೇಶ- ವಿದೇಶ

ಪುರಿ ಜಗನ್ನಾಥನ ರತ್ನ ಭಂಡಾರ ಓಪನ್:‌ 46 ವರ್ಷಗಳ ಬಳಿಕ ಅಲ್ಲಿ ಸಿಕ್ಕಿದ್ದೇನು ಗೊತ್ತಾ.?

ಒಡಿಶಾ: ಪುರಾಣ ಪ್ರಸಿದ್ಧ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರ್‌ ಓಪನ್‌ ಮಾಡಲಾಗಿದೆ.

ಬರೋಬ್ಬರಿ 46 ವರ್ಷಗಳ ಬಳಿಕ ರತ್ನಗಳ ಭಂಡಾರವನ್ನು ಸೂಕ್ತ ಭದ್ರತೆ ಮತ್ತು ಧಾರ್ಮಿಕ ಕಾರ್ಯದ ಜೊತೆ ತೆರೆಯಲಾಗಿದೆ. 1978ರಲ್ಲಿ ಭಂಡಾರದ ಕೊಠಡಿ ತೆರೆಯಲಾಗಿತ್ತು. ಇದಾದ ನಂತರ ಕೊಠಡಿ ತೆರೆದಿರಲಿಲ್ಲ. ಇದೀಗ ನಕಲಿ ಕೀಲಿ ಕೈ ಬಳಸಿ ಇಂದು ಭಂಡಾರವನ್ನು ಓಪನ್‌ ಮಾಡಲಾಗಿದೆ. ನಿರೀಕ್ಷೆಯಂತೆಯೇ ರತ್ನ ಭಂಡಾರದೊಳಗೆ ಚಿನ್ನಾಭರಣಗಳಿರುವ 15 ಪೆಟ್ಟಿಗೆ ಸೇರಿದಂತೆ ಅತ್ಯಮೂಲ್ಯ ಸಂಪತ್ತು ಸಿಕ್ಕಿದೆ ಎನ್ನಲಾಗಿದೆ.

ಮೊದಲಿಗೆ ಬಾಗಿಲು ಓಪನ್‌ ಮಾಡುವುದಕ್ಕೂ ಮುನ್ನ ಜಗನ್ನಾಥನಿಗೆ ಪೂಜೆ ಸಲ್ಲಿಸಿ, ಆಡಳಿತ ಮಂಡಳಿ ಸದಸ್ಯರು ರತ್ನ ಭಂಡಾರದ ಬಾಗಿಲು ತೆರೆದರು.

ಈ ಹಿಂದೆ 1978ರಲ್ಲಿ ಪುರಿ ಜಗನ್ನಾಥನ ರತ್ನ ಭಂಡಾರ ಓಪನ್‌ ಮಾಡಲಾಗಿತ್ತು. ಇದೀಗ ಬರೋಬ್ಬರಿ 46 ವರ್ಷಗಳ ಬಳಿಕ ರತ್ನ ಭಂಡಾರವನ್ನು ಮತ್ತೊಮ್ಮೆ ತೆರೆಯಲಾಗಿದೆ. ರತ್ನ ಭಂಡಾರದ ಬಾಗಿಲು ಓಪನ್‌ ಮಾಡಿದ ಬಳಿಕ ಶಿಫ್ಟಿಂಗ್‌ ಸ್ಟ್ರಾಂಗ್‌ ರೂಮ್‌ಗೆ ರತ್ನಭಂಡಾರ ರವಾನೆ ಮಾಡಲಾಗಿದೆ. ಬೆಲೆಬಾಳುವ ರತ್ನ ಭಂಡಾರಕ್ಕೆ ಬಿಗಿ ಭದ್ರತೆಯನ್ನೂ ಸಹ ಒದಗಿಸಲಾಗಿದೆ.

ಕಾರ್ಯಾಚರಣೆ ವಿಡಿಯೋ ಗೌಪ್ಯತೆ ಕಾಪಾಡಲಾಗುತ್ತೆ. ದಾಖಲೆಗಾಗಿ ಕಾರ್ಯಾಚರಣೆ ವಿಡಿಯೋ ರೆಕಾರ್ಡ್‌ ಮಾಡಲಾಗಿದ್ದು, ದೇಗುಲದ ಪ್ರತಿನಿಧಿಗಳು, ಅಧಿಕಾರಿಗಳು ಭಾಗಿಯಾಗಿದ್ದರು. ಸ್ಟ್ಯಾಂಡರ್ಡ್‌ ಆಪರೇಟಿಂಗ್‌ ಕಾರ್ಯವಿಧಾನ ಮಾರ್ಗಸೂಚಿಯಂತೆ ಬಾಗಿಲು ಓಪನ್‌ ಮಾಡಲಾಗಿದೆ.

ಇನ್ನು ಪುರಿ ಜಗನ್ನಾಥನ ರತ್ನ ಭಂಡಾರದಲ್ಲಿ ಅಪಾರ ಪ್ರಮಾಣದ ಸಂಪತ್ತು ಸಿಕ್ಕಿದೆ ಎನ್ನಲಾಗಿದೆ. ಚಿನ್ನಾಭರಣಗಳಿರುವ 9 ಅಡಿ ಅಗಲ ಮತ್ತು 3 ಅಡಿ ಎತ್ತರದ ಪೆಟ್ಟಿಗೆ, 128 ಕೆಜಿ ತೂಕದ 454 ಚಿನ್ನದ ಆಭರಣಗಳು, 221 ಕೆಜಿ ತೂಕದ 293 ಬೆಳ್ಳಿ ಆಭರಣಗಳು ಭಂಡಾರದಲ್ಲಿ ಸಿಕ್ಕಿವೆ. ಇನ್ನು 12,800ಕ್ಕೂ ಹೆಚ್ಚು ರತ್ನಖಚಿತ ಆಭರಣಗಳು, ಅಮೂಲ್ಯ ಹರಳುಗಳು, 22 ಸಾವಿರಕ್ಕೂ ಹೆಚ್ಚು ಬೆಳ್ಳಿ ವಸ್ತುಗಳು ಸಿಕ್ಕಿವೆ ಎಂಬ ಮಾಹಿತಿ ಲಭ್ಯವಾಗಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

4 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

6 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

6 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

6 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

6 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

6 hours ago