ದೇಶ- ವಿದೇಶ

ಪುರಿ ಜಗನ್ನಾಥನ ರತ್ನ ಭಂಡಾರ ಓಪನ್:‌ 46 ವರ್ಷಗಳ ಬಳಿಕ ಅಲ್ಲಿ ಸಿಕ್ಕಿದ್ದೇನು ಗೊತ್ತಾ.?

ಒಡಿಶಾ: ಪುರಾಣ ಪ್ರಸಿದ್ಧ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರ್‌ ಓಪನ್‌ ಮಾಡಲಾಗಿದೆ.

ಬರೋಬ್ಬರಿ 46 ವರ್ಷಗಳ ಬಳಿಕ ರತ್ನಗಳ ಭಂಡಾರವನ್ನು ಸೂಕ್ತ ಭದ್ರತೆ ಮತ್ತು ಧಾರ್ಮಿಕ ಕಾರ್ಯದ ಜೊತೆ ತೆರೆಯಲಾಗಿದೆ. 1978ರಲ್ಲಿ ಭಂಡಾರದ ಕೊಠಡಿ ತೆರೆಯಲಾಗಿತ್ತು. ಇದಾದ ನಂತರ ಕೊಠಡಿ ತೆರೆದಿರಲಿಲ್ಲ. ಇದೀಗ ನಕಲಿ ಕೀಲಿ ಕೈ ಬಳಸಿ ಇಂದು ಭಂಡಾರವನ್ನು ಓಪನ್‌ ಮಾಡಲಾಗಿದೆ. ನಿರೀಕ್ಷೆಯಂತೆಯೇ ರತ್ನ ಭಂಡಾರದೊಳಗೆ ಚಿನ್ನಾಭರಣಗಳಿರುವ 15 ಪೆಟ್ಟಿಗೆ ಸೇರಿದಂತೆ ಅತ್ಯಮೂಲ್ಯ ಸಂಪತ್ತು ಸಿಕ್ಕಿದೆ ಎನ್ನಲಾಗಿದೆ.

ಮೊದಲಿಗೆ ಬಾಗಿಲು ಓಪನ್‌ ಮಾಡುವುದಕ್ಕೂ ಮುನ್ನ ಜಗನ್ನಾಥನಿಗೆ ಪೂಜೆ ಸಲ್ಲಿಸಿ, ಆಡಳಿತ ಮಂಡಳಿ ಸದಸ್ಯರು ರತ್ನ ಭಂಡಾರದ ಬಾಗಿಲು ತೆರೆದರು.

ಈ ಹಿಂದೆ 1978ರಲ್ಲಿ ಪುರಿ ಜಗನ್ನಾಥನ ರತ್ನ ಭಂಡಾರ ಓಪನ್‌ ಮಾಡಲಾಗಿತ್ತು. ಇದೀಗ ಬರೋಬ್ಬರಿ 46 ವರ್ಷಗಳ ಬಳಿಕ ರತ್ನ ಭಂಡಾರವನ್ನು ಮತ್ತೊಮ್ಮೆ ತೆರೆಯಲಾಗಿದೆ. ರತ್ನ ಭಂಡಾರದ ಬಾಗಿಲು ಓಪನ್‌ ಮಾಡಿದ ಬಳಿಕ ಶಿಫ್ಟಿಂಗ್‌ ಸ್ಟ್ರಾಂಗ್‌ ರೂಮ್‌ಗೆ ರತ್ನಭಂಡಾರ ರವಾನೆ ಮಾಡಲಾಗಿದೆ. ಬೆಲೆಬಾಳುವ ರತ್ನ ಭಂಡಾರಕ್ಕೆ ಬಿಗಿ ಭದ್ರತೆಯನ್ನೂ ಸಹ ಒದಗಿಸಲಾಗಿದೆ.

ಕಾರ್ಯಾಚರಣೆ ವಿಡಿಯೋ ಗೌಪ್ಯತೆ ಕಾಪಾಡಲಾಗುತ್ತೆ. ದಾಖಲೆಗಾಗಿ ಕಾರ್ಯಾಚರಣೆ ವಿಡಿಯೋ ರೆಕಾರ್ಡ್‌ ಮಾಡಲಾಗಿದ್ದು, ದೇಗುಲದ ಪ್ರತಿನಿಧಿಗಳು, ಅಧಿಕಾರಿಗಳು ಭಾಗಿಯಾಗಿದ್ದರು. ಸ್ಟ್ಯಾಂಡರ್ಡ್‌ ಆಪರೇಟಿಂಗ್‌ ಕಾರ್ಯವಿಧಾನ ಮಾರ್ಗಸೂಚಿಯಂತೆ ಬಾಗಿಲು ಓಪನ್‌ ಮಾಡಲಾಗಿದೆ.

ಇನ್ನು ಪುರಿ ಜಗನ್ನಾಥನ ರತ್ನ ಭಂಡಾರದಲ್ಲಿ ಅಪಾರ ಪ್ರಮಾಣದ ಸಂಪತ್ತು ಸಿಕ್ಕಿದೆ ಎನ್ನಲಾಗಿದೆ. ಚಿನ್ನಾಭರಣಗಳಿರುವ 9 ಅಡಿ ಅಗಲ ಮತ್ತು 3 ಅಡಿ ಎತ್ತರದ ಪೆಟ್ಟಿಗೆ, 128 ಕೆಜಿ ತೂಕದ 454 ಚಿನ್ನದ ಆಭರಣಗಳು, 221 ಕೆಜಿ ತೂಕದ 293 ಬೆಳ್ಳಿ ಆಭರಣಗಳು ಭಂಡಾರದಲ್ಲಿ ಸಿಕ್ಕಿವೆ. ಇನ್ನು 12,800ಕ್ಕೂ ಹೆಚ್ಚು ರತ್ನಖಚಿತ ಆಭರಣಗಳು, ಅಮೂಲ್ಯ ಹರಳುಗಳು, 22 ಸಾವಿರಕ್ಕೂ ಹೆಚ್ಚು ಬೆಳ್ಳಿ ವಸ್ತುಗಳು ಸಿಕ್ಕಿವೆ ಎಂಬ ಮಾಹಿತಿ ಲಭ್ಯವಾಗಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೂಡುಮಂಗಳೂರು | ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಅಪಘಾತ : ಸವಾರ ಸಾವು, ಪತ್ನಿ ಗಂಭೀರ

ಕೊಡಗು : ವಾಹನ ತಪಾಸಣೆ (ಚೆಕಿಂಗ್) ನಡೆಸುತ್ತಿದ್ದ ಪೊಲೀಸರನ್ನು ಕಂಡು ಗಾಬರಿಯಾಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ,…

9 mins ago

ಸಫಾರಿ ಪುನರಾರಂಭ : ಮೈಸೂರು ಅರಣ್ಯಭವನಕ್ಕೆ ರೈತ ಮುಖಂಡರ ಮುತ್ತಿಗೆ

ಮೈಸೂರು : ನಾಗರಹೊಳೆ ಮತ್ತು ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನರಾರಂಭಿಸಿರುವುದನ್ನು ಖಂಡಿಸಿ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ನಗರದ ಅಶೋಕಪುರಂನಲ್ಲಿರುವ…

23 mins ago

32 ಕ್ಷೇತ್ರಗಳ ಟಾರ್ಗೆಟ್‌: ನಿಖಿಲ್‌ ಕುಮಾರಸ್ವಾಮಿ ರಾಜ್ಯ ಪ್ರವಾಸ

ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು 2ನೇ ಹಂತದ…

2 hours ago

1.60 ಕೋಟಿ ಲಂಚ ಪಡೆದು ಮುಡಾ ಮಾಜಿ ಆಯುಕ್ತ ನಟೇಶ್‌ಗೆ ಬಡ್ತಿ: ದಾಖಲೆ ಬಿಡುಗಡೆ ಮಾಡಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ…

2 hours ago

ಫೆಬ್ರವರಿ.25ರಂದು ಅಜ್ಜಿಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ: ಬಡಗಲಪುರ ನಾಗೇಂದ್ರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ…

2 hours ago

ಕ್ರಿಕೆಟ್‌ ಪಂದ್ಯಾವಳಿ ವೇಳೆ ಜೇನುನೊಣಗಳ ದಾಳಿ: ಅಂಪೈರ್‌ ದಾರುಣ ಸಾವು

ಉನ್ನಾವೋ: ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ಹಿಂಡು ದಾಳಿ ಮಾಡಿದ ಪರಿಣಾಮ 65 ವರ್ಷದ ಅಂಪೈರ್ ಸಾವನ್ನಪ್ಪಿದ್ದು, ಹಲವಾರು ಆಟಗಾರರು…

3 hours ago