ಒಡಿಶಾ: ಪುರಾಣ ಪ್ರಸಿದ್ಧ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರ್ ಓಪನ್ ಮಾಡಲಾಗಿದೆ.
ಬರೋಬ್ಬರಿ 46 ವರ್ಷಗಳ ಬಳಿಕ ರತ್ನಗಳ ಭಂಡಾರವನ್ನು ಸೂಕ್ತ ಭದ್ರತೆ ಮತ್ತು ಧಾರ್ಮಿಕ ಕಾರ್ಯದ ಜೊತೆ ತೆರೆಯಲಾಗಿದೆ. 1978ರಲ್ಲಿ ಭಂಡಾರದ ಕೊಠಡಿ ತೆರೆಯಲಾಗಿತ್ತು. ಇದಾದ ನಂತರ ಕೊಠಡಿ ತೆರೆದಿರಲಿಲ್ಲ. ಇದೀಗ ನಕಲಿ ಕೀಲಿ ಕೈ ಬಳಸಿ ಇಂದು ಭಂಡಾರವನ್ನು ಓಪನ್ ಮಾಡಲಾಗಿದೆ. ನಿರೀಕ್ಷೆಯಂತೆಯೇ ರತ್ನ ಭಂಡಾರದೊಳಗೆ ಚಿನ್ನಾಭರಣಗಳಿರುವ 15 ಪೆಟ್ಟಿಗೆ ಸೇರಿದಂತೆ ಅತ್ಯಮೂಲ್ಯ ಸಂಪತ್ತು ಸಿಕ್ಕಿದೆ ಎನ್ನಲಾಗಿದೆ.
ಮೊದಲಿಗೆ ಬಾಗಿಲು ಓಪನ್ ಮಾಡುವುದಕ್ಕೂ ಮುನ್ನ ಜಗನ್ನಾಥನಿಗೆ ಪೂಜೆ ಸಲ್ಲಿಸಿ, ಆಡಳಿತ ಮಂಡಳಿ ಸದಸ್ಯರು ರತ್ನ ಭಂಡಾರದ ಬಾಗಿಲು ತೆರೆದರು.
ಈ ಹಿಂದೆ 1978ರಲ್ಲಿ ಪುರಿ ಜಗನ್ನಾಥನ ರತ್ನ ಭಂಡಾರ ಓಪನ್ ಮಾಡಲಾಗಿತ್ತು. ಇದೀಗ ಬರೋಬ್ಬರಿ 46 ವರ್ಷಗಳ ಬಳಿಕ ರತ್ನ ಭಂಡಾರವನ್ನು ಮತ್ತೊಮ್ಮೆ ತೆರೆಯಲಾಗಿದೆ. ರತ್ನ ಭಂಡಾರದ ಬಾಗಿಲು ಓಪನ್ ಮಾಡಿದ ಬಳಿಕ ಶಿಫ್ಟಿಂಗ್ ಸ್ಟ್ರಾಂಗ್ ರೂಮ್ಗೆ ರತ್ನಭಂಡಾರ ರವಾನೆ ಮಾಡಲಾಗಿದೆ. ಬೆಲೆಬಾಳುವ ರತ್ನ ಭಂಡಾರಕ್ಕೆ ಬಿಗಿ ಭದ್ರತೆಯನ್ನೂ ಸಹ ಒದಗಿಸಲಾಗಿದೆ.
ಕಾರ್ಯಾಚರಣೆ ವಿಡಿಯೋ ಗೌಪ್ಯತೆ ಕಾಪಾಡಲಾಗುತ್ತೆ. ದಾಖಲೆಗಾಗಿ ಕಾರ್ಯಾಚರಣೆ ವಿಡಿಯೋ ರೆಕಾರ್ಡ್ ಮಾಡಲಾಗಿದ್ದು, ದೇಗುಲದ ಪ್ರತಿನಿಧಿಗಳು, ಅಧಿಕಾರಿಗಳು ಭಾಗಿಯಾಗಿದ್ದರು. ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನ ಮಾರ್ಗಸೂಚಿಯಂತೆ ಬಾಗಿಲು ಓಪನ್ ಮಾಡಲಾಗಿದೆ.
ಇನ್ನು ಪುರಿ ಜಗನ್ನಾಥನ ರತ್ನ ಭಂಡಾರದಲ್ಲಿ ಅಪಾರ ಪ್ರಮಾಣದ ಸಂಪತ್ತು ಸಿಕ್ಕಿದೆ ಎನ್ನಲಾಗಿದೆ. ಚಿನ್ನಾಭರಣಗಳಿರುವ 9 ಅಡಿ ಅಗಲ ಮತ್ತು 3 ಅಡಿ ಎತ್ತರದ ಪೆಟ್ಟಿಗೆ, 128 ಕೆಜಿ ತೂಕದ 454 ಚಿನ್ನದ ಆಭರಣಗಳು, 221 ಕೆಜಿ ತೂಕದ 293 ಬೆಳ್ಳಿ ಆಭರಣಗಳು ಭಂಡಾರದಲ್ಲಿ ಸಿಕ್ಕಿವೆ. ಇನ್ನು 12,800ಕ್ಕೂ ಹೆಚ್ಚು ರತ್ನಖಚಿತ ಆಭರಣಗಳು, ಅಮೂಲ್ಯ ಹರಳುಗಳು, 22 ಸಾವಿರಕ್ಕೂ ಹೆಚ್ಚು ಬೆಳ್ಳಿ ವಸ್ತುಗಳು ಸಿಕ್ಕಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…