ಹೈದರಾಬಾದ್: ಇತ್ತೀಚೆಗೆ ಬಿಡುಗಡೆಗೊಂಡ ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾರ್ ಪೊಲೀಸರು ಬಂಧಿಸಿದ್ದಾರೆ.
ಹೈದರಾಬಾದ್ನ ಅವರ ನಿವಾಸದಿಂದಲೇ ಬಂಧಿಸಲಾಗಿದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.
ಏನಿದು ಪ್ರಕರಣ?
ಇದೇ ತಿಂಗಳ 4 ರಂದು ಹೈದರಾಬಾದ್ನ ಸಂಧ್ಯಾ ಚಿತ್ರಮಂದಿರದಲ್ಲಿ ನಡೆದ ಪುಷ್ಪ-2 ಪ್ರೀಮಿಯರ್ ಶೋ ವೇಳೆ ಅಲ್ಲು ಅರ್ಜುನ್ ಅಲ್ಲಿಗೆ ಬಂದು ಹೋಗಿದ್ದರು. ಆ ವೇಳೆ ಅಭಿಮಾನಿಗಳು ಮುಗಿಬಿದ್ದರು. ಈ ವೇಳೆ ರೇವತಿ ಎಂಬ ಮಹಿಳೆ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದು, ಆಕೆಯ ಮಗ ಗಂಭೀರ ಗಾಯಗೊಂಡಿದ್ದ. ಈ ಘಟನೆ ಕುರಿತ ಚಿಕ್ಕಡಪಲ್ಲಿ ಪೊಲೀಸರು ಅಲ್ಲು ಅರ್ಜುನ್, ಸಿನಿಮಾ ಘಟಕ ಹಾಗೂ ಚಿತ್ರಮಂದಿರ ಆಡಳಿತ ಮಂಡಳಿ ವಿರುದ್ಧ ದೂರು ದಾಖಲಿಸಿಕೊಂಡಿದ್ದರು.
ಈ ಸಂಬಂಧ ಅಲ್ಲು ಅರ್ಜುನ್ ಹೈಕೋರ್ಟ್ ಮೇಟ್ಟಿಲೇರಿ, ಪ್ರಕರಣ ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು. ಈ ನಡುವೆ ಪೊಲೀಸರು ಶುಕ್ರವಾರ ಆತನನ್ನು ವಶಕ್ಕೆ ಪಡೆದಿದ್ದಾರೆ.
ಯಾವುದೇ ಮಾಹಿತಿ ನೀಡಿಲ್ಲ ಮತ್ತು ಸೂಕ್ತ ಭದ್ರತೆಯನ್ನು ಏರ್ಪಡಿಸದೆ ಐಕನ್ ಸ್ಟಾರ್ ಅಲ್ಲು ಅರ್ಜುನ್ ಚಿತ್ರಮಂದಿರಕ್ಕೆ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ ಮೂವರನ್ನು ಬಂಧಿಸಿದ್ದಾರೆ.
ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…
ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…
ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…
ರೆಸಾರ್ಟ್ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…
ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…