ಹೈದರಾಬಾದ್: ಇತ್ತೀಚೆಗೆ ಬಿಡುಗಡೆಗೊಂಡ ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾರ್ ಪೊಲೀಸರು ಬಂಧಿಸಿದ್ದಾರೆ.
ಹೈದರಾಬಾದ್ನ ಅವರ ನಿವಾಸದಿಂದಲೇ ಬಂಧಿಸಲಾಗಿದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.
ಏನಿದು ಪ್ರಕರಣ?
ಇದೇ ತಿಂಗಳ 4 ರಂದು ಹೈದರಾಬಾದ್ನ ಸಂಧ್ಯಾ ಚಿತ್ರಮಂದಿರದಲ್ಲಿ ನಡೆದ ಪುಷ್ಪ-2 ಪ್ರೀಮಿಯರ್ ಶೋ ವೇಳೆ ಅಲ್ಲು ಅರ್ಜುನ್ ಅಲ್ಲಿಗೆ ಬಂದು ಹೋಗಿದ್ದರು. ಆ ವೇಳೆ ಅಭಿಮಾನಿಗಳು ಮುಗಿಬಿದ್ದರು. ಈ ವೇಳೆ ರೇವತಿ ಎಂಬ ಮಹಿಳೆ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದು, ಆಕೆಯ ಮಗ ಗಂಭೀರ ಗಾಯಗೊಂಡಿದ್ದ. ಈ ಘಟನೆ ಕುರಿತ ಚಿಕ್ಕಡಪಲ್ಲಿ ಪೊಲೀಸರು ಅಲ್ಲು ಅರ್ಜುನ್, ಸಿನಿಮಾ ಘಟಕ ಹಾಗೂ ಚಿತ್ರಮಂದಿರ ಆಡಳಿತ ಮಂಡಳಿ ವಿರುದ್ಧ ದೂರು ದಾಖಲಿಸಿಕೊಂಡಿದ್ದರು.
ಈ ಸಂಬಂಧ ಅಲ್ಲು ಅರ್ಜುನ್ ಹೈಕೋರ್ಟ್ ಮೇಟ್ಟಿಲೇರಿ, ಪ್ರಕರಣ ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು. ಈ ನಡುವೆ ಪೊಲೀಸರು ಶುಕ್ರವಾರ ಆತನನ್ನು ವಶಕ್ಕೆ ಪಡೆದಿದ್ದಾರೆ.
ಯಾವುದೇ ಮಾಹಿತಿ ನೀಡಿಲ್ಲ ಮತ್ತು ಸೂಕ್ತ ಭದ್ರತೆಯನ್ನು ಏರ್ಪಡಿಸದೆ ಐಕನ್ ಸ್ಟಾರ್ ಅಲ್ಲು ಅರ್ಜುನ್ ಚಿತ್ರಮಂದಿರಕ್ಕೆ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ ಮೂವರನ್ನು ಬಂಧಿಸಿದ್ದಾರೆ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…