ಹೈದರಾಬಾದ್: ಇತ್ತೀಚೆಗೆ ಬಿಡುಗಡೆಗೊಂಡ ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾರ್ ಪೊಲೀಸರು ಬಂಧಿಸಿದ್ದಾರೆ.
ಹೈದರಾಬಾದ್ನ ಅವರ ನಿವಾಸದಿಂದಲೇ ಬಂಧಿಸಲಾಗಿದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.
ಏನಿದು ಪ್ರಕರಣ?
ಇದೇ ತಿಂಗಳ 4 ರಂದು ಹೈದರಾಬಾದ್ನ ಸಂಧ್ಯಾ ಚಿತ್ರಮಂದಿರದಲ್ಲಿ ನಡೆದ ಪುಷ್ಪ-2 ಪ್ರೀಮಿಯರ್ ಶೋ ವೇಳೆ ಅಲ್ಲು ಅರ್ಜುನ್ ಅಲ್ಲಿಗೆ ಬಂದು ಹೋಗಿದ್ದರು. ಆ ವೇಳೆ ಅಭಿಮಾನಿಗಳು ಮುಗಿಬಿದ್ದರು. ಈ ವೇಳೆ ರೇವತಿ ಎಂಬ ಮಹಿಳೆ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದು, ಆಕೆಯ ಮಗ ಗಂಭೀರ ಗಾಯಗೊಂಡಿದ್ದ. ಈ ಘಟನೆ ಕುರಿತ ಚಿಕ್ಕಡಪಲ್ಲಿ ಪೊಲೀಸರು ಅಲ್ಲು ಅರ್ಜುನ್, ಸಿನಿಮಾ ಘಟಕ ಹಾಗೂ ಚಿತ್ರಮಂದಿರ ಆಡಳಿತ ಮಂಡಳಿ ವಿರುದ್ಧ ದೂರು ದಾಖಲಿಸಿಕೊಂಡಿದ್ದರು.
ಈ ಸಂಬಂಧ ಅಲ್ಲು ಅರ್ಜುನ್ ಹೈಕೋರ್ಟ್ ಮೇಟ್ಟಿಲೇರಿ, ಪ್ರಕರಣ ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು. ಈ ನಡುವೆ ಪೊಲೀಸರು ಶುಕ್ರವಾರ ಆತನನ್ನು ವಶಕ್ಕೆ ಪಡೆದಿದ್ದಾರೆ.
ಯಾವುದೇ ಮಾಹಿತಿ ನೀಡಿಲ್ಲ ಮತ್ತು ಸೂಕ್ತ ಭದ್ರತೆಯನ್ನು ಏರ್ಪಡಿಸದೆ ಐಕನ್ ಸ್ಟಾರ್ ಅಲ್ಲು ಅರ್ಜುನ್ ಚಿತ್ರಮಂದಿರಕ್ಕೆ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ ಮೂವರನ್ನು ಬಂಧಿಸಿದ್ದಾರೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…