ದೇಶ- ವಿದೇಶ

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ.

ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಎ11 ಆರೋಪಿ ಆಗಿ ಹೆಸರಿಸಲಾಗಿದೆ. ಈ ಪ್ರಕರಣದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದರೆ, ಅವರ ಮಗ ತೀವ್ರವಾಗಿ ಗಾಯಗೊಂಡಿದ್ದರು. 2024 ರ ಡಿಸೆಂಬರ್ 04 ರಂದು ಅಲ್ಲು ಅರ್ಜುನ್ ತಮ್ಮ ಕುಟುಂಬದೊಂದಿಗೆ ಹೈದರಾಬಾದ್ನ ಸಂಧ್ಯಾ ಚಿತ್ರಮಂದಿರಕ್ಕೆ ‘ಪುಷ್ಪ 2’ ಸಿನಿಮಾ ವೀಕ್ಷಿಸಲು ಆಗಮಿಸಿದ್ದರು. ಆಗ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ಇದರಿಂದ ಉಂಟಾದ ಕಾಲ್ತುಳಿತದಲ್ಲಿ ಸಾಕಷ್ಟು ಹಾನಿ ಆಯಿತು. ಅಲ್ಲು ಅರ್ಜುನ್ ಬಂದ ಕಾರಣದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರೆಂದು ಪೊಲೀಸರು ವಾದಿಸಿದರು. ಅವರನ್ನು ಬಂಧಿಸಿ ಒಂದು ದಿನ ಜೈಲಿನಲ್ಲೂ ಇಡಲಾಯಿತು ಈ ಘಟನೆ ನಡೆದು ಒಂದು ವರ್ಷ ಕಳೆದಿದೆ. ಈಗ ಪ್ರಕರಣದಲ್ಲಿ ಚಾರ್ಜ್ಶೀಟ್ ಸಲ್ಲಿಕೆ ಆಗಿದೆ.

ಇದನ್ನು ಓದಿ: ದುರಂದರ್ ದರ್ಬಾರ್….. ಮರಳಿ ಟ್ರ್ಯಾಕ್ ಗೆ ಬಂತು ಬಾಲಿವುಡ್.?

ಸಂಧ್ಯಾ ಥಿಯೇಟರ್ ಮ್ಯಾನೇಜ್ಮೆಂಟ್ ಅನ್ನು ಎ1 ಆಗಿ ಪರಿಗಣಿಸಲಾಗಿದೆ. ಘಟನೆಗೆ ಕಾರಣವಾದ ಲೋಪಗಳಿಗೆ ಥಿಯೇಟರ್ನವರು ಮುಖ್ಯ ಹೊಣೆ ಎಂಬುದು ತನಿಖೆ ವೇಳೆ ತಿಳಿದು ಬಂದಿದೆ. ಜನಸಂದಣಿಯ ನಿರ್ವಹಣೆ ಸರಿಯಾಗಿಲ್ಲದ ಕಾರಣ ಮತ್ತು ಸರಿಯಾದ ಸುರಕ್ಷತಾ ಕ್ರಮಗಳ ಕೊರತೆಯಿಂದಾಗಿ ಪರಿಸ್ಥಿತಿ ನಿಯಂತ್ರಣ ತಪ್ಪಿತು. ನಟನನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದರು. ಆಯೋಜಕರು ಜನರನ್ನು ನಿಯಂತ್ರಿಸುವಲ್ಲಿ ವಿಫಲರಾದರು ಎಂದು ತನಿಖೆ ಹೇಳಿದೆ.

ಸಂಧ್ಯಾ ಚಿತ್ರಮಂದಿರ ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಅಲ್ಲು ಅರ್ಜುನ್ ಮತ್ತು ‘ಪುಷ್ಪ 2’ ಚಿತ್ರತಂಡದ ವತಿಯಿಂದ ಬರೋಬ್ಬರಿ ಎರಡು ಕೋಟಿ ರೂಪಾಯಿ ಹಣ ನೀಡಲಾಗಿತ್ತು. ನಟ ಅಲ್ಲು ಅರ್ಜುನ್ ಅವರು ಕುಟುಂಬಕ್ಕೆ 25 ಲಕ್ಷ ರೂಪಾಯಿ ಘೋಷಣೆ ಮಾಡಿದ್ದರು.

ಆಂದೋಲನ ಡೆಸ್ಕ್

Recent Posts

ಕಾರ್ಕಹಳ್ಳಿ ಬಸವೇಶ್ವರ ಜಾತ್ರೆ: ಇಂದು ಕೊಂಡೋತ್ಸವ

ಅಣ್ಣೂರು ಸತೀಶ್ ನಾಳೆ ಸಂಜೆ ವಿಜೃಂಭಣೆಯ ರಥೋತ್ಸವ,ಅನ್ನಸಂತರ್ಪಣೆ  ಭಾರತೀನಗರ: ಕಾರ್ಕಹಳ್ಳಿ ಶ್ರೀ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.೩ರ…

8 mins ago

‘ಮಕ್ಕಳ ವ್ಯಕ್ತಿತ್ವ ವಿಕಸನಕ್ಕಾಗಿ ಶಾಲೆಗಳಲ್ಲಿ ರಂಗಶಿಕ್ಷಣ ನೀಡಿ’

ಗಿರೀಶ್ ಹುಣಸೂರು ಕೆಪಿಎಸ್, ಪಿಎಂಶ್ರೀ ಶಾಲೆಗಳಲ್ಲಿ ರಂಗಶಿಕ್ಷಕರ ನೇಮಕಕ್ಕೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ಮೈಸೂರು: ಇಂದಿನ ಮಕ್ಕಳಲ್ಲಿ…

13 mins ago

1000 ಕೋಟಿ ರೂ. ಸಂಪನ್ಮೂಲ ಕ್ರೋಢೀಕರಣಕ್ಕೆ ಎಂಡಿಎ ಪ್ಲಾನ್!

ಕೆ.ಬಿ.ರಮೇಶನಾಯಕ ಮೈಸೂರು: ಹಲವು ಅವ್ಯವಹಾರಗಳಿಂದಾಗಿ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗೆ ಗುರಿ ಯಾಗಿದ್ದ ಹಿಂದಿನ ಮುಡಾ, ಎಂಡಿಎ ಆಗಿ ಪರಿವರ್ತನೆಯಾದ…

17 mins ago

ಮಾನವತೆಯ ಸಂದೇಶ ಸಾರಿದ ಯತೀಂದ್ರ

ಡಾ.ಎಸ್‌. ಕೃಷ್ಣಪ್ಪ ಕಿತ್ತೂರು  ಇಂದು ಕೈವಾರ ತಾತಯ್ಯ ಅವರ ಜಯಂತಿ ‘ಉತ್ತಮ ಕುಲವೆಂದು ಹೇಳುವ ಮಾತು ಯುಕ್ತವಲ್ಲಣ್ಣ’... ೧೮ನೇ ಶತಮಾ…

22 mins ago

ಪ್ರಮುಖ ತಂತ್ರಜ್ಞಾನ ಸ್ಟಾರ್ಟ್ ಅಪ್‌ಗಳ ಹೋರಾಟ

ವಿಶ್ವಪ್ರಸಾದ್ ಆಳ್ವ ಒಂದೆರಡು ವರ್ಷಗಳ ಹಿಂದೆ ದೇಶದ ಹಣಕಾಸು ಸಚಿವರು ಮೂಲ ತಂತ್ರಜ್ಞಾನ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ (ಆರ್…

27 mins ago

ಇರಾನ್ ಸಂಘರ್ಷದ ಪೂರ್ವಾಪರ

ಪ್ರೊ.ಪ್ರೇಮ ಶೇಖರ ಒಂದೂವರೆ ತಿಂಗಳಿನಿಂದ ಜಗತ್ತು ಆತಂಕದಿಂದ ಎದುರು ನೋಡುತ್ತಿದ್ದಂತಹ ಯುದ್ಧ ಪಶ್ಚಿಮ ಏಷ್ಯಾದಲ್ಲಿ ಪ್ರಾರಂಭವಾಗಿದೆ. ಜನವರಿ ಮೊದಲ ಭಾಗದಲ್ಲಿ…

32 mins ago