ದೇಶ- ವಿದೇಶ

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ.

ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಎ11 ಆರೋಪಿ ಆಗಿ ಹೆಸರಿಸಲಾಗಿದೆ. ಈ ಪ್ರಕರಣದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದರೆ, ಅವರ ಮಗ ತೀವ್ರವಾಗಿ ಗಾಯಗೊಂಡಿದ್ದರು. 2024 ರ ಡಿಸೆಂಬರ್ 04 ರಂದು ಅಲ್ಲು ಅರ್ಜುನ್ ತಮ್ಮ ಕುಟುಂಬದೊಂದಿಗೆ ಹೈದರಾಬಾದ್ನ ಸಂಧ್ಯಾ ಚಿತ್ರಮಂದಿರಕ್ಕೆ ‘ಪುಷ್ಪ 2’ ಸಿನಿಮಾ ವೀಕ್ಷಿಸಲು ಆಗಮಿಸಿದ್ದರು. ಆಗ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ಇದರಿಂದ ಉಂಟಾದ ಕಾಲ್ತುಳಿತದಲ್ಲಿ ಸಾಕಷ್ಟು ಹಾನಿ ಆಯಿತು. ಅಲ್ಲು ಅರ್ಜುನ್ ಬಂದ ಕಾರಣದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರೆಂದು ಪೊಲೀಸರು ವಾದಿಸಿದರು. ಅವರನ್ನು ಬಂಧಿಸಿ ಒಂದು ದಿನ ಜೈಲಿನಲ್ಲೂ ಇಡಲಾಯಿತು ಈ ಘಟನೆ ನಡೆದು ಒಂದು ವರ್ಷ ಕಳೆದಿದೆ. ಈಗ ಪ್ರಕರಣದಲ್ಲಿ ಚಾರ್ಜ್ಶೀಟ್ ಸಲ್ಲಿಕೆ ಆಗಿದೆ.

ಇದನ್ನು ಓದಿ: ದುರಂದರ್ ದರ್ಬಾರ್….. ಮರಳಿ ಟ್ರ್ಯಾಕ್ ಗೆ ಬಂತು ಬಾಲಿವುಡ್.?

ಸಂಧ್ಯಾ ಥಿಯೇಟರ್ ಮ್ಯಾನೇಜ್ಮೆಂಟ್ ಅನ್ನು ಎ1 ಆಗಿ ಪರಿಗಣಿಸಲಾಗಿದೆ. ಘಟನೆಗೆ ಕಾರಣವಾದ ಲೋಪಗಳಿಗೆ ಥಿಯೇಟರ್ನವರು ಮುಖ್ಯ ಹೊಣೆ ಎಂಬುದು ತನಿಖೆ ವೇಳೆ ತಿಳಿದು ಬಂದಿದೆ. ಜನಸಂದಣಿಯ ನಿರ್ವಹಣೆ ಸರಿಯಾಗಿಲ್ಲದ ಕಾರಣ ಮತ್ತು ಸರಿಯಾದ ಸುರಕ್ಷತಾ ಕ್ರಮಗಳ ಕೊರತೆಯಿಂದಾಗಿ ಪರಿಸ್ಥಿತಿ ನಿಯಂತ್ರಣ ತಪ್ಪಿತು. ನಟನನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದರು. ಆಯೋಜಕರು ಜನರನ್ನು ನಿಯಂತ್ರಿಸುವಲ್ಲಿ ವಿಫಲರಾದರು ಎಂದು ತನಿಖೆ ಹೇಳಿದೆ.

ಸಂಧ್ಯಾ ಚಿತ್ರಮಂದಿರ ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಅಲ್ಲು ಅರ್ಜುನ್ ಮತ್ತು ‘ಪುಷ್ಪ 2’ ಚಿತ್ರತಂಡದ ವತಿಯಿಂದ ಬರೋಬ್ಬರಿ ಎರಡು ಕೋಟಿ ರೂಪಾಯಿ ಹಣ ನೀಡಲಾಗಿತ್ತು. ನಟ ಅಲ್ಲು ಅರ್ಜುನ್ ಅವರು ಕುಟುಂಬಕ್ಕೆ 25 ಲಕ್ಷ ರೂಪಾಯಿ ಘೋಷಣೆ ಮಾಡಿದ್ದರು.

ಆಂದೋಲನ ಡೆಸ್ಕ್

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

13 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

22 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

22 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

22 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

22 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

22 hours ago