ದೇಶ- ವಿದೇಶ

ನೇಪಾಳ : ನೂತನ ಪ್ರಧಾನಿಯಾಗಿ ಪುಷ್ಪ ಕಮಲ್ ದಹಾಲ್ ಪ್ರಮಾಣವಚನ

ಕಠ್ಮಂಡು(ನೇಪಾಳ): ನೇಪಾಳದ ನೂತನ ಪ್ರಧಾನಿಯಾಗಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಪ್ರಮಾಣ ವಚನ ಸ್ವೀಕರಿಸಿದರು. ನಾಟಕೀಯ ಬೆಳವಣಿಗೆಗಳ ನಡುವೆ ಹೊಸ ಮೈತ್ರಿ ಮಾಡಿಕೊಂಡ ಪ್ರಚಂಡ ಮೂರನೇ ಬಾರಿಗೆ ಪ್ರಧಾನಿಯಾಗಿ ಜವಾಬ್ದಾರಿ ವಹಿಸಿಕೊಂಡರು. ರಾಷ್ಟ್ರಪತಿಗಳ ಅಧಿಕೃತ ನಿವಾಸ ಶೀತಲ್ ನಿವಾಸ್‌ನಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಪ್ರಧಾನಿ ಹುದ್ದೆ ಹಂಚಿಕೆ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗಿ ಹಳೆ ಮೈತ್ರಿಕೂಟಕ್ಕೆ ಪ್ರಚಂಡ ಗುಡ್ ಬೈ ಹೇಳಿದ್ದರು. ಇದರಿಂದಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆಡಳಿತದಲ್ಲಿದ ಐದು ಪಕ್ಷಗಳಿಂದ ಕೂಡಿದ ಮೈತ್ರಿಕೂಟ ಸಮ್ಮಿಶ್ರ ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ.ಚುನಾವಣೆಗೆ ಮುನ್ನ ಮಾಜಿ ಪ್ರಧಾನಿ ದೇವುಬಾ ಮತ್ತು ಪ್ರಚಂಡ ಎರಡೂವರೆ ವರ್ಷಗಳ ಕಾಲ ಪ್ರಧಾನಿ ಹುದ್ದೆಯನ್ನು ಹಂಚಿಕೊಳ್ಳಲು ಒಪ್ಪಂದ ಮಾಡಿಕೊಂಡಿದ್ದರು. ಆದರೆ, ಮೊದಲ ಎರಡೂವರೆ ವರ್ಷಗಳ ಕಾಲ ಪ್ರಧಾನ ಮಂತ್ರಿ ಹುದ್ದೆಯನ್ನು ಅಲಂಕರಿಸಿದ ದೇವುಬಾ, ಪ್ರಚಂಡ ಅವರಿಗೆ ಅಧಿಕಾರ ಹಸ್ತಾಂತರಿಸುವ ಪ್ರಸ್ತಾಪವನ್ನು ತಿರಸ್ಕರಿಸಿದ್ದರು.
ಹೀಗಾಗಿ ಅಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿ ಮೈತ್ರಿ ಮುರಿದು ಬಿದ್ದ ಪರಿಣಾಮ ಪ್ರಚಂಡ ಅವರು ತಮ್ಮ ಹಳೆಯ ಗೆಳೆಯ, ವಿರೋಧ ಪಕ್ಷದಲ್ಲಿದ್ದ ಮಾಜಿ ಪ್ರಧಾನಿ ಓಲಿ ಅವರನ್ನು ಸಂಪರ್ಕಿಸಿ ಬೆಂಬಲ ಕೋರಿದರು. ಒಲಿ ಇದಕ್ಕೆ ಒಪ್ಪಿಗೆ ಸೂಚಿಸಿದರು ಇದರಿಂದ 169 ಸದಸ್ಯರ ಬೆಂಬಲದೊಂದಿಗೆ ಪ್ರಚಂಡ ಸರ್ಕಾರ ರಚಿಸಿದ್ದಾರೆ, ಈ ಹಿನ್ನೆಲೆಯಲ್ಲಿ ಭಾನುವಾರ ಪ್ರಚಂಡ ಅವರನ್ನು ಪ್ರಧಾನಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

andolanait

Recent Posts

ಮೈಸೂರು ಮುಡಾ ಹಗರಣ: ಹೊಸ ಬಾಂಬ್‌ ಸಿಡಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ಮುಖ್ಯ…

31 mins ago

ಗುಂಡಾಲ್‌ ಜಲಾಶಯದಲ್ಲಿ ಹುಲಿ ಶವ ಪತ್ತೆ ಪ್ರಕರಣ: ಸ್ಕೂಟರ್‌ ಕ್ಲಚ್‌ ವೈರ್‌ ಉರುಳಿಗೆ ವ್ಯಾಘ್ರ ಬಲಿ?

ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…

42 mins ago

ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್‌ಗೆ ಭೇಟಿ: ನೆತನ್ಯಾಹು ಘೋಷಣೆ

ಟೆಲ್‌ ಅವಿವ್:‌ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್‌ಗೆ ಪ್ರಯಾಣಿಸಲಿದ್ದಾರೆ ಎಂದು…

56 mins ago

ಹಲವು ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ ದಿಢೀರ್‌ ರದ್ದು?

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…

60 mins ago

ಮಹದೇಶ್ವರ ಬೆಟ್ಟ: ಪೌರಕಾರ್ಮಿಕರ ಜೊತೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ಎ.ಈ.ರಘು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ…

2 hours ago

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…

5 hours ago