ದೇಶ- ವಿದೇಶ

ನೇಪಾಳ : ನೂತನ ಪ್ರಧಾನಿಯಾಗಿ ಪುಷ್ಪ ಕಮಲ್ ದಹಾಲ್ ಪ್ರಮಾಣವಚನ

ಕಠ್ಮಂಡು(ನೇಪಾಳ): ನೇಪಾಳದ ನೂತನ ಪ್ರಧಾನಿಯಾಗಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಪ್ರಮಾಣ ವಚನ ಸ್ವೀಕರಿಸಿದರು. ನಾಟಕೀಯ ಬೆಳವಣಿಗೆಗಳ ನಡುವೆ ಹೊಸ ಮೈತ್ರಿ ಮಾಡಿಕೊಂಡ ಪ್ರಚಂಡ ಮೂರನೇ ಬಾರಿಗೆ ಪ್ರಧಾನಿಯಾಗಿ ಜವಾಬ್ದಾರಿ ವಹಿಸಿಕೊಂಡರು. ರಾಷ್ಟ್ರಪತಿಗಳ ಅಧಿಕೃತ ನಿವಾಸ ಶೀತಲ್ ನಿವಾಸ್‌ನಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಪ್ರಧಾನಿ ಹುದ್ದೆ ಹಂಚಿಕೆ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗಿ ಹಳೆ ಮೈತ್ರಿಕೂಟಕ್ಕೆ ಪ್ರಚಂಡ ಗುಡ್ ಬೈ ಹೇಳಿದ್ದರು. ಇದರಿಂದಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆಡಳಿತದಲ್ಲಿದ ಐದು ಪಕ್ಷಗಳಿಂದ ಕೂಡಿದ ಮೈತ್ರಿಕೂಟ ಸಮ್ಮಿಶ್ರ ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ.ಚುನಾವಣೆಗೆ ಮುನ್ನ ಮಾಜಿ ಪ್ರಧಾನಿ ದೇವುಬಾ ಮತ್ತು ಪ್ರಚಂಡ ಎರಡೂವರೆ ವರ್ಷಗಳ ಕಾಲ ಪ್ರಧಾನಿ ಹುದ್ದೆಯನ್ನು ಹಂಚಿಕೊಳ್ಳಲು ಒಪ್ಪಂದ ಮಾಡಿಕೊಂಡಿದ್ದರು. ಆದರೆ, ಮೊದಲ ಎರಡೂವರೆ ವರ್ಷಗಳ ಕಾಲ ಪ್ರಧಾನ ಮಂತ್ರಿ ಹುದ್ದೆಯನ್ನು ಅಲಂಕರಿಸಿದ ದೇವುಬಾ, ಪ್ರಚಂಡ ಅವರಿಗೆ ಅಧಿಕಾರ ಹಸ್ತಾಂತರಿಸುವ ಪ್ರಸ್ತಾಪವನ್ನು ತಿರಸ್ಕರಿಸಿದ್ದರು.
ಹೀಗಾಗಿ ಅಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿ ಮೈತ್ರಿ ಮುರಿದು ಬಿದ್ದ ಪರಿಣಾಮ ಪ್ರಚಂಡ ಅವರು ತಮ್ಮ ಹಳೆಯ ಗೆಳೆಯ, ವಿರೋಧ ಪಕ್ಷದಲ್ಲಿದ್ದ ಮಾಜಿ ಪ್ರಧಾನಿ ಓಲಿ ಅವರನ್ನು ಸಂಪರ್ಕಿಸಿ ಬೆಂಬಲ ಕೋರಿದರು. ಒಲಿ ಇದಕ್ಕೆ ಒಪ್ಪಿಗೆ ಸೂಚಿಸಿದರು ಇದರಿಂದ 169 ಸದಸ್ಯರ ಬೆಂಬಲದೊಂದಿಗೆ ಪ್ರಚಂಡ ಸರ್ಕಾರ ರಚಿಸಿದ್ದಾರೆ, ಈ ಹಿನ್ನೆಲೆಯಲ್ಲಿ ಭಾನುವಾರ ಪ್ರಚಂಡ ಅವರನ್ನು ಪ್ರಧಾನಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

andolanait

Recent Posts

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

2 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

3 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

4 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

5 hours ago

ಜೂನ್.‌19ಕ್ಕೆ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಓಪನ್:‌ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್‌ ಮತ್ತು ಅಮೇರಿಕಾ ನಡುವಿನ ಒಪ್ಪಂದ್‌ ನಂತರ ಶುಕ್ರವಾರದಿಂದ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…

6 hours ago

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

9 hours ago