ದೇಶ- ವಿದೇಶ

ನೇಪಾಳ : ನೂತನ ಪ್ರಧಾನಿಯಾಗಿ ಪುಷ್ಪ ಕಮಲ್ ದಹಾಲ್ ಪ್ರಮಾಣವಚನ

ಕಠ್ಮಂಡು(ನೇಪಾಳ): ನೇಪಾಳದ ನೂತನ ಪ್ರಧಾನಿಯಾಗಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಪ್ರಮಾಣ ವಚನ ಸ್ವೀಕರಿಸಿದರು. ನಾಟಕೀಯ ಬೆಳವಣಿಗೆಗಳ ನಡುವೆ ಹೊಸ ಮೈತ್ರಿ ಮಾಡಿಕೊಂಡ ಪ್ರಚಂಡ ಮೂರನೇ ಬಾರಿಗೆ ಪ್ರಧಾನಿಯಾಗಿ ಜವಾಬ್ದಾರಿ ವಹಿಸಿಕೊಂಡರು. ರಾಷ್ಟ್ರಪತಿಗಳ ಅಧಿಕೃತ ನಿವಾಸ ಶೀತಲ್ ನಿವಾಸ್‌ನಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಪ್ರಧಾನಿ ಹುದ್ದೆ ಹಂಚಿಕೆ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗಿ ಹಳೆ ಮೈತ್ರಿಕೂಟಕ್ಕೆ ಪ್ರಚಂಡ ಗುಡ್ ಬೈ ಹೇಳಿದ್ದರು. ಇದರಿಂದಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆಡಳಿತದಲ್ಲಿದ ಐದು ಪಕ್ಷಗಳಿಂದ ಕೂಡಿದ ಮೈತ್ರಿಕೂಟ ಸಮ್ಮಿಶ್ರ ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ.ಚುನಾವಣೆಗೆ ಮುನ್ನ ಮಾಜಿ ಪ್ರಧಾನಿ ದೇವುಬಾ ಮತ್ತು ಪ್ರಚಂಡ ಎರಡೂವರೆ ವರ್ಷಗಳ ಕಾಲ ಪ್ರಧಾನಿ ಹುದ್ದೆಯನ್ನು ಹಂಚಿಕೊಳ್ಳಲು ಒಪ್ಪಂದ ಮಾಡಿಕೊಂಡಿದ್ದರು. ಆದರೆ, ಮೊದಲ ಎರಡೂವರೆ ವರ್ಷಗಳ ಕಾಲ ಪ್ರಧಾನ ಮಂತ್ರಿ ಹುದ್ದೆಯನ್ನು ಅಲಂಕರಿಸಿದ ದೇವುಬಾ, ಪ್ರಚಂಡ ಅವರಿಗೆ ಅಧಿಕಾರ ಹಸ್ತಾಂತರಿಸುವ ಪ್ರಸ್ತಾಪವನ್ನು ತಿರಸ್ಕರಿಸಿದ್ದರು.
ಹೀಗಾಗಿ ಅಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿ ಮೈತ್ರಿ ಮುರಿದು ಬಿದ್ದ ಪರಿಣಾಮ ಪ್ರಚಂಡ ಅವರು ತಮ್ಮ ಹಳೆಯ ಗೆಳೆಯ, ವಿರೋಧ ಪಕ್ಷದಲ್ಲಿದ್ದ ಮಾಜಿ ಪ್ರಧಾನಿ ಓಲಿ ಅವರನ್ನು ಸಂಪರ್ಕಿಸಿ ಬೆಂಬಲ ಕೋರಿದರು. ಒಲಿ ಇದಕ್ಕೆ ಒಪ್ಪಿಗೆ ಸೂಚಿಸಿದರು ಇದರಿಂದ 169 ಸದಸ್ಯರ ಬೆಂಬಲದೊಂದಿಗೆ ಪ್ರಚಂಡ ಸರ್ಕಾರ ರಚಿಸಿದ್ದಾರೆ, ಈ ಹಿನ್ನೆಲೆಯಲ್ಲಿ ಭಾನುವಾರ ಪ್ರಚಂಡ ಅವರನ್ನು ಪ್ರಧಾನಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

andolanait

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

5 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

6 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

6 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

7 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

8 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

8 hours ago