ಹೊಸದಿಲ್ಲಿ : ಮುಂದಿನ ಎರಡು ವರ್ಷಗಳ ಅವಧಿಗೆ ಹಿರಿಯ ವಕೀಲ ಆರ್. ವೆಂಕಟರಮಣಿ ಅವರನ್ನು ಭಾರತದ ಅಟಾರ್ನಿ ಜನರಲ್ ಆಗಿ ಮರು ನೇಮಕ ಮಾಡಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ.
ಅಕ್ಟೋಬರ್ ೧ ರಿಂದ ಜಾರಿಗೆ ಬರುವಂತೆ ದೇಶದ ಉನ್ನತ ಕಾನೂನು ಅಧಿಕಾರಿಯಾಗಿ ಆರ್. ವೆಂಕಟರಮಣಿ ಅವರನ್ನು ಮರು ನೇಮಕ ಮಾಡಲಾಗಿದೆ. ಅವರ ಪ್ರಸ್ತುತ ಮೂರು ವರ್ಷಗಳ ಅವಧಿ ಸೆಪ್ಟೆಂಬರ್ ೩೦ ರಂದು ಪೂರ್ಣವಾಗಲಿದೆ.
ಇದನ್ನೂ ಓದಿ:-ಬೆಂಗಳೂರು-ಮುಂಬೈ ನಡುವೆ ಸೂಪರ್ಫಾಸ್ಟ್ ರೈಲು ಘೋಷಣೆ
೨೦೨೫ರ ಅಕ್ಟೋಬರ್ ೧ರಿಂದ ಜಾರಿಗೆ ಬರುವಂತೆ ಮುಂದಿನ ಎರಡು ವರ್ಷಗಳ ಅವಧಿಗೆ ಭಾರತದ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲರಾದ ಆರ್ ವೆಂಕಟರಮಣಿ ಅವರನ್ನು ಮರು ನೇಮಕ ಮಾಡಲು ರಾಷ್ಟ್ರಪತಿಗಳು ಸಂತೋಷಪಡುತ್ತಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
೨೦೨೨ರ ಸೆಪ್ಟೆಂಬರ್ ೩೦ರಂದು ಅಟಾರ್ನಿ ಜನರಲ್ ಆಗಿದ್ದ ಕೆಕೆ ವೇಣುಗೋಪಾಲ್ ಅವರಿಂದ ವೆಂಕಟರಮಣಿಯವರು ಅಧಿಕಾರ ವಹಿಸಿಕೊಂಡರು. ಅಟಾರ್ನಿ ಜನರಲ್ ಎಂಬುದು ಸಾಂವಿಧಾನಿಕ ಹುದ್ದೆಯಾಗಿದ್ದು, ಕೇಂದ್ರ ಸರ್ಕಾರದ ಶಿಫಾರಸಿನ ಮೇರೆಗೆ ರಾಷ್ಟ್ರಪತಿಗಳು ನೇಮಕ ಮಾಡುತ್ತಾರೆ.
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…