ಹೊಸದಿಲ್ಲಿ : ಮುಂದಿನ ಎರಡು ವರ್ಷಗಳ ಅವಧಿಗೆ ಹಿರಿಯ ವಕೀಲ ಆರ್. ವೆಂಕಟರಮಣಿ ಅವರನ್ನು ಭಾರತದ ಅಟಾರ್ನಿ ಜನರಲ್ ಆಗಿ ಮರು ನೇಮಕ ಮಾಡಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ.
ಅಕ್ಟೋಬರ್ ೧ ರಿಂದ ಜಾರಿಗೆ ಬರುವಂತೆ ದೇಶದ ಉನ್ನತ ಕಾನೂನು ಅಧಿಕಾರಿಯಾಗಿ ಆರ್. ವೆಂಕಟರಮಣಿ ಅವರನ್ನು ಮರು ನೇಮಕ ಮಾಡಲಾಗಿದೆ. ಅವರ ಪ್ರಸ್ತುತ ಮೂರು ವರ್ಷಗಳ ಅವಧಿ ಸೆಪ್ಟೆಂಬರ್ ೩೦ ರಂದು ಪೂರ್ಣವಾಗಲಿದೆ.
ಇದನ್ನೂ ಓದಿ:-ಬೆಂಗಳೂರು-ಮುಂಬೈ ನಡುವೆ ಸೂಪರ್ಫಾಸ್ಟ್ ರೈಲು ಘೋಷಣೆ
೨೦೨೫ರ ಅಕ್ಟೋಬರ್ ೧ರಿಂದ ಜಾರಿಗೆ ಬರುವಂತೆ ಮುಂದಿನ ಎರಡು ವರ್ಷಗಳ ಅವಧಿಗೆ ಭಾರತದ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲರಾದ ಆರ್ ವೆಂಕಟರಮಣಿ ಅವರನ್ನು ಮರು ನೇಮಕ ಮಾಡಲು ರಾಷ್ಟ್ರಪತಿಗಳು ಸಂತೋಷಪಡುತ್ತಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
೨೦೨೨ರ ಸೆಪ್ಟೆಂಬರ್ ೩೦ರಂದು ಅಟಾರ್ನಿ ಜನರಲ್ ಆಗಿದ್ದ ಕೆಕೆ ವೇಣುಗೋಪಾಲ್ ಅವರಿಂದ ವೆಂಕಟರಮಣಿಯವರು ಅಧಿಕಾರ ವಹಿಸಿಕೊಂಡರು. ಅಟಾರ್ನಿ ಜನರಲ್ ಎಂಬುದು ಸಾಂವಿಧಾನಿಕ ಹುದ್ದೆಯಾಗಿದ್ದು, ಕೇಂದ್ರ ಸರ್ಕಾರದ ಶಿಫಾರಸಿನ ಮೇರೆಗೆ ರಾಷ್ಟ್ರಪತಿಗಳು ನೇಮಕ ಮಾಡುತ್ತಾರೆ.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…