ನವದೆಹಲಿ: ಹಿಂಡೆನ್ಬರ್ಗ್ ವರದಿಯಿಂದ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಗೆ ಧಕ್ಕೆಯಾಗಿದೆ ಎಂದು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಈ ಬಗ್ಗೆ ಪ್ರಧಾನಿ ಮೋದಿಯವರು JPC ತನಿಖೆಗೆ ಏಕೆ ಹೆದರುತ್ತಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ಅದಾನಿ ಷೇರು ಹಗರಣದಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಬುಚ್ ಮತ್ತು ಅವರ ಪತಿ ಧವಲ್ ಬುಚ್ ಪಾತ್ರವಿದೆ ಎಂದು ಹಿಂಡೆನ್ಬರ್ಗ್ ವರದಿ ನೀಡಿದ್ದು, ಈ ವರದಿ ಆಧರಿಸಿ ರಾಹುಲ್ ಗಾಂಧಿ, ಪ್ರಧಾನಿ ಮೋದಿಗೆ ಚಾಟಿ ಬೀಸಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ರಾಗಾ, ಪ್ರಧಾನಿ ಮೋದಿ ಜಿಪಿಸಿ ತನಿಖೆಗೆ ಹೆದರುವುದೇಕೆ? ಮತ್ತು ಅದು ಏನನ್ನು ಬಹಿರಂಗಪಡಿಸಬಹುದು ಎಂಬುದು ಈಗ ಸ್ಪಷ್ಟವಾಗಿದೆ.
ಸಣ್ಣ ಚಿಲ್ಲರೆ ಹೂಡಿಕೆದಾರರ ಸಂಪತ್ತನ್ನು ಸಂರಕ್ಷಿಸುವ ಹೊಣೆಗಾರಿಕೆ ಹೊಂದಿರುವ ಸೆಕ್ಯುರಿಟೀಸ್ ನಿಯಂತ್ರಕವಾದ SEBI ಯ ಸಮಗ್ರತೆಯನ್ನು ಅದರ ಅಧ್ಯಕ್ಷರ ವಿರುದ್ಧದ ಆರೋಪಗಳಿಂದ ಗಂಭೀರವಾಗಿ ರಾಜಿ ಮಾಡಿಕೊಳ್ಳಲಾಗಿದೆ.
ದೇಶಾದ್ಯಂತ ಪ್ರಾಮಾಣಿಕ ಹೂಡಿಕೆದಾರರು ಸರ್ಕಾರಕ್ಕೆ ಒತ್ತುವ ಪ್ರಶ್ನೆಗಳನ್ನು ಹೊಂದಿದ್ದಾರೆ:
– ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಇನ್ನೂ ಏಕೆ ರಾಜೀನಾಮೆ ನೀಡಿಲ್ಲ?
– ಹೂಡಿಕೆದಾರರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕಳೆದುಕೊಂಡರೆ, ಯಾರು ಜವಾಬ್ದಾರರಾಗುತ್ತಾರೆ – ಪ್ರಧಾನಿ ಮೋದಿ, ಸೆಬಿ ಅಧ್ಯಕ್ಷ ಅಥವಾ ಗೌತಮ್ ಅದಾನಿ?
– ಹೊರಬಿದ್ದಿರುವ ಹೊಸ ಮತ್ತು ಅತ್ಯಂತ ಗಂಭೀರ ಆರೋಪಗಳ ಬೆಳಕಿನಲ್ಲಿ, ಸುಪ್ರೀಂ ಕೋರ್ಟ್ ಈ ವಿಷಯವನ್ನು ಮತ್ತೊಮ್ಮೆ ಸ್ವಯಂಪ್ರೇರಿತವಾಗಿ ಪರಿಶೀಲಿಸುತ್ತದೆಯೇ? ಎಂದು ಬರೆದುಕೊಂಡಿರುವ ರಾಹುಲ್ ಗಾಂಧಿ ಆಡಳಿತ ಪಕ್ಷಕ್ಕೆ ಚಾಟಿ ಬೀಸಿದ್ದಾರೆ.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…