ದೇಶ- ವಿದೇಶ

ಸೆಬಿ ಪ್ರಕರಣ: ಪ್ರಧಾನಿ ಮೋದಿ ಜಿಪಿಸಿ ತನಿಖೆಗೆ ಹೆದರುವುದೇಕೆ?: ರಾಗಾ ಪ್ರಶ್ನೆ

ನವದೆಹಲಿ: ಹಿಂಡೆನ್‌ಬರ್ಗ್‌ ವರದಿಯಿಂದ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಗೆ ಧಕ್ಕೆಯಾಗಿದೆ ಎಂದು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ಈ ಬಗ್ಗೆ ಪ್ರಧಾನಿ ಮೋದಿಯವರು JPC ತನಿಖೆಗೆ ಏಕೆ ಹೆದರುತ್ತಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ರಾಹುಲ್‌ ಗಾಂಧಿ ಆಗ್ರಹಿಸಿದ್ದಾರೆ.

ಅದಾನಿ ಷೇರು ಹಗರಣದಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಬುಚ್‌ ಮತ್ತು ಅವರ ಪತಿ ಧವಲ್‌ ಬುಚ್‌ ಪಾತ್ರವಿದೆ ಎಂದು ಹಿಂಡೆನ್‌ಬರ್ಗ್‌ ವರದಿ ನೀಡಿದ್ದು, ಈ ವರದಿ ಆಧರಿಸಿ ರಾಹುಲ್‌ ಗಾಂಧಿ, ಪ್ರಧಾನಿ ಮೋದಿಗೆ ಚಾಟಿ ಬೀಸಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ರಾಗಾ, ಪ್ರಧಾನಿ ಮೋದಿ ಜಿಪಿಸಿ ತನಿಖೆಗೆ ಹೆದರುವುದೇಕೆ? ಮತ್ತು ಅದು ಏನನ್ನು ಬಹಿರಂಗಪಡಿಸಬಹುದು ಎಂಬುದು ಈಗ ಸ್ಪಷ್ಟವಾಗಿದೆ.

ಸಣ್ಣ ಚಿಲ್ಲರೆ ಹೂಡಿಕೆದಾರರ ಸಂಪತ್ತನ್ನು ಸಂರಕ್ಷಿಸುವ ಹೊಣೆಗಾರಿಕೆ ಹೊಂದಿರುವ ಸೆಕ್ಯುರಿಟೀಸ್ ನಿಯಂತ್ರಕವಾದ SEBI ಯ ಸಮಗ್ರತೆಯನ್ನು ಅದರ ಅಧ್ಯಕ್ಷರ ವಿರುದ್ಧದ ಆರೋಪಗಳಿಂದ ಗಂಭೀರವಾಗಿ ರಾಜಿ ಮಾಡಿಕೊಳ್ಳಲಾಗಿದೆ.

ದೇಶಾದ್ಯಂತ ಪ್ರಾಮಾಣಿಕ ಹೂಡಿಕೆದಾರರು ಸರ್ಕಾರಕ್ಕೆ ಒತ್ತುವ ಪ್ರಶ್ನೆಗಳನ್ನು ಹೊಂದಿದ್ದಾರೆ:

– ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಇನ್ನೂ ಏಕೆ ರಾಜೀನಾಮೆ ನೀಡಿಲ್ಲ?
– ಹೂಡಿಕೆದಾರರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕಳೆದುಕೊಂಡರೆ, ಯಾರು ಜವಾಬ್ದಾರರಾಗುತ್ತಾರೆ – ಪ್ರಧಾನಿ ಮೋದಿ, ಸೆಬಿ ಅಧ್ಯಕ್ಷ ಅಥವಾ ಗೌತಮ್ ಅದಾನಿ?
– ಹೊರಬಿದ್ದಿರುವ ಹೊಸ ಮತ್ತು ಅತ್ಯಂತ ಗಂಭೀರ ಆರೋಪಗಳ ಬೆಳಕಿನಲ್ಲಿ, ಸುಪ್ರೀಂ ಕೋರ್ಟ್ ಈ ವಿಷಯವನ್ನು ಮತ್ತೊಮ್ಮೆ ಸ್ವಯಂಪ್ರೇರಿತವಾಗಿ ಪರಿಶೀಲಿಸುತ್ತದೆಯೇ? ಎಂದು ಬರೆದುಕೊಂಡಿರುವ ರಾಹುಲ್‌ ಗಾಂಧಿ ಆಡಳಿತ ಪಕ್ಷಕ್ಕೆ ಚಾಟಿ ಬೀಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

‘ಧಮ್ಮಪಯಣ’ ಪ್ರಚಾರ ವಾಹನಗಳಿಗೆ ಎಆರ್‌ಕೆ ಚಾಲನೆ

ಚಾ.ನಗರದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಚಾರ ಮಾಡಲಿರುವ ವಾಹನಗಳು ಚಾಮರಾಜನಗರ : ಧಮ್ಮ ಪಯಣ ಜಾಗೃತಿ ಜಾಥಾದ…

17 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಮೈಸೂರು ದಸರಾ ಚಲನಚಿತ್ರೋತ್ಸವಕ್ಕೆ ಕೊಕ್?!

ಮೈಸೂರು ದಸರಾ ಎಂದರೆ ಜಂಬೂಸವಾರಿ, ಅರಮನೆಯ ದೀಪಾಲಂಕಾರ, ಸಂಗೀತ-ನೃತ್ಯ ಕಾರ್ಯಕ್ರಮಗಳು, ಯುವ ದಸರಾ, ಆಹಾರ ಮೇಳ, ವಸ್ತುಪ್ರದರ್ಶನ ಮಾತ್ರವಲ್ಲ. ಕಳೆದ…

17 hours ago

ಜಂಬೂಸವಾರಿ ; ಯಾರು ಹೊಸ ರಾಯಭಾರಿ?

ಕೆ. ಬಿ. ರಮೇಶನಾಯಕ ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಲಿರುವ ಗಜಪಡೆಯ ಹೊಸ ಸಾರಥಿಯ ಆಯ್ಕೆಗಾಗಿ…

17 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌  4 ಶುಕ್ರವಾರ

17 hours ago

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್ ಅಮಾನತ್ತು

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ…

1 day ago

ವ್ಯಾಪಕ ಟೀಕೆ : ವಿವಾದಾತ್ಮಕ ʼಉದ್ಯಾನ ಮಸೂದೆʼ ಹಿಂಪಡೆಯಲು ಸರ್ಕಾರ ನಿರ್ಧಾರ

​ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…

1 day ago