ನವದೆಹಲಿ: ಕೇರಳ ಮಾಜಿ ಮುಖ್ಯಮಂತ್ರಿ, ಕೇರಳದ ಹಿರಿಯ ಕಾಂಗ್ರೆಸ್ ನಾಯಕ ದಿವಂಗತ ಉಮ್ಮನ್ ಚಾಂಡಿ ಸ್ಮರಣಾರ್ಥವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಉಮ್ಮನ್ ಚಾಂಡಿ ಸಾಮಾಜಿಕ ಸೇವಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಸಂಸದ ಶಶಿ ತರೂರ್ ಅವರ ಅಧ್ಯಕ್ಷತೆಯಲ್ಲಿ ನುರಿತ ತೀರ್ಪುಗಾರರ ಸಮಿತಿಯು ರಾಹುಲ್ ಗಾಂಧಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.
ಉಮ್ಮನ್ ಚಾಂಡಿ ಫೌಂಡೇಷನ್ ಭಾನುವಾರ (ಜು.21) ರಾಹುಲ್ ಗಾಂಧಿ ಅವರಿಗೆ ಮೊದಲ ಉಮ್ಮನ್ ಚಾಂಡಿ ಸಮಾಜ ಸೇವಕ ಪ್ರಶಸ್ತಿ ನೀಡಲಾಗಿದೆ ಎಂದು ತಿಳಿಸಿದೆ. ಈ ಪ್ರಶಸ್ತಿ ಜತೆಗೆ ಒಂದು ಲಕ್ಷ ನಗದು ಹಾಗೂ ಕಲಾಕೃತಿ (ಖ್ಯಾತ ಕಲಾವಿದ ನೇಮೊನ್ ಪುಷ್ಪರಾಜ್ ವಿನ್ಯಾಸಿಸಿದ ಕಲಾಕೃತಿ) ನೀಡಲಾಗುವುದು ಎಂದು ಘೋಷಿಸಿದೆ.
ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ದೇಶಾದ್ಯಂತ ಜನರ ಕಷ್ಟಗಳನ್ನು ಆಲಿಸಿ, ಅವರ ಕಷ್ಟಗಳಿಗೆ ಧನಿಯಾಗಿದ್ದ ರಾಹುಲ್ ಅವರ ಕಾರ್ಯ ಸಾಧನೆಗಾಗಿ ಈ ಪ್ರಶಸ್ತಿ ಸಲ್ಲುತ್ತಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ದೊಡ್ಡ ಕವಲಂದೆ : 112 ತುರ್ತು ವಾಹನ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ನಂಜನಗೂಡು ತಾಲ್ಲೂಕಿನ ಕವಲಂದೆ…
ವಾಷಿಂಗ್ಟನ್ : ದೀರ್ಘಕಾಲದಿಂದ ಬಾಕಿ ಉಳಿದಿರುವ ರಕ್ಷಣಾ ಖರೀದಿ ಮಾತುಕತೆ ಹಾಗೂ ವಾಣಿಜ್ಯ ವ್ಯವಹಾರಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಭಾರತದ ಪ್ರಧಾನಿ…
ಕೊಡಗು : ಕರುನಾಡಿನ ಕೊಡಗಿನ ಸುಂದರಿ ಸಿನಿ ತಾರೆ ರಶ್ಮಿಕಾ ಮಂದಣ್ಣ ದೇಶ-ವಿದೇಶಗಳಲ್ಲೂ ಖ್ಯಾತಿ ಪಡೆದಿದ್ದಾರೆ. ಹೀಗಾಗಿ ಅವರು ಆಗಾಗ್ಗೆ…
ನಂಜನಗೂಡು : ಅಪ್ರಾಪ್ತೆಯ ಹಿಂದೆ ಬಿದ್ದು ಪ್ರೀತಿಗೆ ಒತ್ತಾಯಿಸಿ ಮದುವೆ ಆಗುವಂತೆ ಪೀಡಿಸಿ ಮಾನಸಿಕ ಕಿರುಕುಳ ನೀಡಿದ ಹಿನ್ನಲೆ ವಿಧ್ಯಾರ್ಥಿನಿ…
ಮೈಸೂರು : ನಾನು ಚಾಮರಾಜ ಕ್ಷೇತ್ರದ ಟಿಕೆಟ್ ಆಕಾಂಕ್ಷಿ. ರಾಷ್ಟ್ರ ಮಟ್ಟಕ್ಕೆ ಹೋಗಲಿಲ್ಲ ಅಂದ್ರೆ ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋಗಲು ಆಗುತ್ತಾ?…
ಮೈಸೂರು : ರಾಜ್ಯದಲ್ಲಿ ಸರಿಯಾದ ಯೋಜನೆಗಳನ್ನು ಜಾರಿಗೆ ತರುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲರಾಗಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಗಳು ಹೇಗೆಲ್ಲಾ ಅನುಷ್ಠಾನ…