ನವದೆಹಲಿ: ಕೇರಳ ಮಾಜಿ ಮುಖ್ಯಮಂತ್ರಿ, ಕೇರಳದ ಹಿರಿಯ ಕಾಂಗ್ರೆಸ್ ನಾಯಕ ದಿವಂಗತ ಉಮ್ಮನ್ ಚಾಂಡಿ ಸ್ಮರಣಾರ್ಥವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಉಮ್ಮನ್ ಚಾಂಡಿ ಸಾಮಾಜಿಕ ಸೇವಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಸಂಸದ ಶಶಿ ತರೂರ್ ಅವರ ಅಧ್ಯಕ್ಷತೆಯಲ್ಲಿ ನುರಿತ ತೀರ್ಪುಗಾರರ ಸಮಿತಿಯು ರಾಹುಲ್ ಗಾಂಧಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.
ಉಮ್ಮನ್ ಚಾಂಡಿ ಫೌಂಡೇಷನ್ ಭಾನುವಾರ (ಜು.21) ರಾಹುಲ್ ಗಾಂಧಿ ಅವರಿಗೆ ಮೊದಲ ಉಮ್ಮನ್ ಚಾಂಡಿ ಸಮಾಜ ಸೇವಕ ಪ್ರಶಸ್ತಿ ನೀಡಲಾಗಿದೆ ಎಂದು ತಿಳಿಸಿದೆ. ಈ ಪ್ರಶಸ್ತಿ ಜತೆಗೆ ಒಂದು ಲಕ್ಷ ನಗದು ಹಾಗೂ ಕಲಾಕೃತಿ (ಖ್ಯಾತ ಕಲಾವಿದ ನೇಮೊನ್ ಪುಷ್ಪರಾಜ್ ವಿನ್ಯಾಸಿಸಿದ ಕಲಾಕೃತಿ) ನೀಡಲಾಗುವುದು ಎಂದು ಘೋಷಿಸಿದೆ.
ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ದೇಶಾದ್ಯಂತ ಜನರ ಕಷ್ಟಗಳನ್ನು ಆಲಿಸಿ, ಅವರ ಕಷ್ಟಗಳಿಗೆ ಧನಿಯಾಗಿದ್ದ ರಾಹುಲ್ ಅವರ ಕಾರ್ಯ ಸಾಧನೆಗಾಗಿ ಈ ಪ್ರಶಸ್ತಿ ಸಲ್ಲುತ್ತಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…
ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…
ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…