ನವದೆಹಲಿ: ಮತದಾರರ ಪಟ್ಟಿಯಲ್ಲಿನ ದೋಷಗಳ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ಲೋಕಸಭೆಯ ಸದನದಲ್ಲಿ ಇಂದು(ಮಾರ್ಚ್.10) ಮತದಾರರ ಪಟ್ಟಿಯಲ್ಲಿನ ದೋಷಗಳ ಕುರಿತು ವಿಪಕ್ಷಗಳು ಗದ್ದಲ ಎಬ್ಬಿಸಿದ ಬಳಿಕ ಮಾತನಾಡಿದ ಅವರು, ಸರ್ಕಾರ ಮತದಾರರ ಪಟ್ಟಿಗಳನ್ನು ಸಿದ್ಧಪಡಿಸುವುದಿಲ್ಲ ಎಂಬ ನಿಮ್ಮ ಹೇಳಿಕೆಯನ್ನು ನಾವು ಸ್ವೀಕರಿಸುತ್ತೇವೆ. ಆದರೆ ಈ ವಿಚಾರದ ಬಗ್ಗೆ ಚರ್ಚೆ ನಡೆಯಬೇಕೆಂದು ಮಹಾರಾಷ್ಟ್ರ ಸೇರಿದಂತೆ ಪ್ರತಿಯೊಂದು ರಾಜ್ಯದಲ್ಲೂ ವಿರೋಧ ಪಕ್ಷಗಳು ಒಂದೇ ಧ್ವನಿಯಲ್ಲಿ ಪ್ರಶ್ನೆಗಳನ್ನು ಎತ್ತಿವೆ. ಹೀಗಾಗಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.
ಇನ್ನು ರಾಜ್ಯಸಭೆಯಲ್ಲಿ ಇದೇ ವಿಚಾರದ ಬಗ್ಗೆ ಮಾತನಾಡಿದ ಸಂಸದ ಕಪಿಲ್ ಸಿಂಬಲ್ ಅವರು, ಚುನಾವಣಾ ಆಯೋಗವೂ ಎನ್ಡಿಎ ನೇತೃತ್ವದ ಬಿಜೆಪಿ ಸರ್ಕಾರದ ಕೈಯಲ್ಲಿದೆ. ಈ ವ್ಯವಸ್ಥೆ ಹೀಗೆಯೇ ಮುಂದುವರೆದರೆ ಇದು ಪ್ರಜಾಪ್ರಭುತ್ವವಾಗಲ್ಲ. ಚುನಾವಣಾ ಆಯೋಗವು ಸರ್ಕಾರಕ್ಕಾಗಿ ಲಾಬಿ ಮಾಡುತ್ತಲೇ ಇದ್ದು, ಬರುವ ಫಲಿತಾಂಶಗಳು ನಿಮ್ಮ ಮುಂದೆ ಇವೆ. ಹಾಗಾಗಿ ಈ ನೆಲದ ಮೇಲೆ ಏನಾಗುತ್ತದೆ ಎಂಬುದು ಎಲ್ಲರಿಗೂ ತಿಳಿದಿದೆ, ಆದರೆ ಇದನ್ನು ಪ್ರಶ್ನಿಸಲು ಯಾರೂ ಇಲ್ಲ ಎಂದು ಹೇಳಿದರು.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…