ನವದೆಹಲಿ: ಮತದಾರರ ಪಟ್ಟಿಯಲ್ಲಿನ ದೋಷಗಳ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ಲೋಕಸಭೆಯ ಸದನದಲ್ಲಿ ಇಂದು(ಮಾರ್ಚ್.10) ಮತದಾರರ ಪಟ್ಟಿಯಲ್ಲಿನ ದೋಷಗಳ ಕುರಿತು ವಿಪಕ್ಷಗಳು ಗದ್ದಲ ಎಬ್ಬಿಸಿದ ಬಳಿಕ ಮಾತನಾಡಿದ ಅವರು, ಸರ್ಕಾರ ಮತದಾರರ ಪಟ್ಟಿಗಳನ್ನು ಸಿದ್ಧಪಡಿಸುವುದಿಲ್ಲ ಎಂಬ ನಿಮ್ಮ ಹೇಳಿಕೆಯನ್ನು ನಾವು ಸ್ವೀಕರಿಸುತ್ತೇವೆ. ಆದರೆ ಈ ವಿಚಾರದ ಬಗ್ಗೆ ಚರ್ಚೆ ನಡೆಯಬೇಕೆಂದು ಮಹಾರಾಷ್ಟ್ರ ಸೇರಿದಂತೆ ಪ್ರತಿಯೊಂದು ರಾಜ್ಯದಲ್ಲೂ ವಿರೋಧ ಪಕ್ಷಗಳು ಒಂದೇ ಧ್ವನಿಯಲ್ಲಿ ಪ್ರಶ್ನೆಗಳನ್ನು ಎತ್ತಿವೆ. ಹೀಗಾಗಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.
ಇನ್ನು ರಾಜ್ಯಸಭೆಯಲ್ಲಿ ಇದೇ ವಿಚಾರದ ಬಗ್ಗೆ ಮಾತನಾಡಿದ ಸಂಸದ ಕಪಿಲ್ ಸಿಂಬಲ್ ಅವರು, ಚುನಾವಣಾ ಆಯೋಗವೂ ಎನ್ಡಿಎ ನೇತೃತ್ವದ ಬಿಜೆಪಿ ಸರ್ಕಾರದ ಕೈಯಲ್ಲಿದೆ. ಈ ವ್ಯವಸ್ಥೆ ಹೀಗೆಯೇ ಮುಂದುವರೆದರೆ ಇದು ಪ್ರಜಾಪ್ರಭುತ್ವವಾಗಲ್ಲ. ಚುನಾವಣಾ ಆಯೋಗವು ಸರ್ಕಾರಕ್ಕಾಗಿ ಲಾಬಿ ಮಾಡುತ್ತಲೇ ಇದ್ದು, ಬರುವ ಫಲಿತಾಂಶಗಳು ನಿಮ್ಮ ಮುಂದೆ ಇವೆ. ಹಾಗಾಗಿ ಈ ನೆಲದ ಮೇಲೆ ಏನಾಗುತ್ತದೆ ಎಂಬುದು ಎಲ್ಲರಿಗೂ ತಿಳಿದಿದೆ, ಆದರೆ ಇದನ್ನು ಪ್ರಶ್ನಿಸಲು ಯಾರೂ ಇಲ್ಲ ಎಂದು ಹೇಳಿದರು.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…