ದೇಶ- ವಿದೇಶ

ಲೋಕಸಭೆ ಸದನ| ಮತದಾರರ ಪಟ್ಟಿಯಲ್ಲಿ ದೋಷ: ಚರ್ಚೆಗೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಒತ್ತಾಯ

ನವದೆಹಲಿ: ಮತದಾರರ ಪಟ್ಟಿಯಲ್ಲಿನ ದೋಷಗಳ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಒತ್ತಾಯಿಸಿದ್ದಾರೆ.

ಲೋಕಸಭೆಯ ಸದನದಲ್ಲಿ ಇಂದು(ಮಾರ್ಚ್.10) ಮತದಾರರ ಪಟ್ಟಿಯಲ್ಲಿನ ದೋಷಗಳ ಕುರಿತು ವಿಪಕ್ಷಗಳು ಗದ್ದಲ ಎಬ್ಬಿಸಿದ ಬಳಿಕ ಮಾತನಾಡಿದ ಅವರು, ಸರ್ಕಾರ ಮತದಾರರ ಪಟ್ಟಿಗಳನ್ನು ಸಿದ್ಧಪಡಿಸುವುದಿಲ್ಲ ಎಂಬ ನಿಮ್ಮ ಹೇಳಿಕೆಯನ್ನು ನಾವು ಸ್ವೀಕರಿಸುತ್ತೇವೆ. ಆದರೆ ಈ ವಿಚಾರದ ಬಗ್ಗೆ ಚರ್ಚೆ ನಡೆಯಬೇಕೆಂದು ಮಹಾರಾಷ್ಟ್ರ ಸೇರಿದಂತೆ ಪ್ರತಿಯೊಂದು ರಾಜ್ಯದಲ್ಲೂ ವಿರೋಧ ಪಕ್ಷಗಳು ಒಂದೇ ಧ್ವನಿಯಲ್ಲಿ ಪ್ರಶ್ನೆಗಳನ್ನು ಎತ್ತಿವೆ. ಹೀಗಾಗಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಇನ್ನು ರಾಜ್ಯಸಭೆಯಲ್ಲಿ ಇದೇ ವಿಚಾರದ ಬಗ್ಗೆ ಮಾತನಾಡಿದ ಸಂಸದ ಕಪಿಲ್‌ ಸಿಂಬಲ್‌ ಅವರು, ಚುನಾವಣಾ ಆಯೋಗವೂ ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರದ ಕೈಯಲ್ಲಿದೆ. ಈ ವ್ಯವಸ್ಥೆ ಹೀಗೆಯೇ ಮುಂದುವರೆದರೆ ಇದು ಪ್ರಜಾಪ್ರಭುತ್ವವಾಗಲ್ಲ. ಚುನಾವಣಾ ಆಯೋಗವು ಸರ್ಕಾರಕ್ಕಾಗಿ ಲಾಬಿ ಮಾಡುತ್ತಲೇ ಇದ್ದು, ಬರುವ ಫಲಿತಾಂಶಗಳು ನಿಮ್ಮ ಮುಂದೆ ಇವೆ. ಹಾಗಾಗಿ ಈ ನೆಲದ ಮೇಲೆ ಏನಾಗುತ್ತದೆ ಎಂಬುದು ಎಲ್ಲರಿಗೂ ತಿಳಿದಿದೆ, ಆದರೆ ಇದನ್ನು ಪ್ರಶ್ನಿಸಲು ಯಾರೂ ಇಲ್ಲ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

3 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

3 hours ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

3 hours ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

3 hours ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

3 hours ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

3 hours ago