ನವದೆಹಲಿ: ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಹುಲ್ ಗಾಂಧಿ ಅವರು, ಮತದಾರರ ಪಟ್ಟಿಯಲ್ಲಿ ನಕಲಿ ಜನರನ್ನು ಸೇರಿಸಲಾಗುತ್ತಿದೆ ಎಂದು ದಾಖಲೆ ಸಮೇತ ಮತಗಳ್ಳತನ ನಡೆದಿರುವುದನ್ನು ಬಯಲಿಗೆಳೆದಿದ್ದಾರೆ.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಮತ ಕಳ್ಳತನ ನಡೆದಿದೆ ಎಂದು ಆರೋಪಿಸಿದರು. ಮಹದೇವಪುರ ವಿಧಾನಸಭಾ ಕ್ಷೇಥ್ರದಲ್ಲಿ 6.5 ಲಕ್ಷ ಮತಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದರು.
ಮಹದೇವಪುರದಲ್ಲಿ ಒಬ್ಬನೇ ಮತದಾರನಿಂದ ಹಲವು ಮತಗಟ್ಟೆಯಲ್ಲಿ ಮತದಾನ ಮಾಡಲಾಗಿದೆ. ಇದೇ ರೀತಿ 11 ಸಾವಿರಕ್ಕೂ ಹೆಚ್ಚು ಜನರಿಂದ ನಕಲಿ ಮತದಾನ ಮಾಡಲಾಗಿದೆ ಎಂದು ಹೇಳಿದರು. ಇನ್ನು 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲೂ ಮತಗಳ್ಳತನ ನಡೆದಿದ್ದು, ಅಂತಿಮ ಫಲಿತಾಂಶ ಬಂದ ನಂತರ ಗೊತ್ತಾಗಿದೆ ಎಂದು ಹೇಳಿದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…