ದೇಶ- ವಿದೇಶ

ನಾಮಪತ್ರ ಸಲ್ಲಿಸಿದ ರಾಹುಲ್‌ ಗಾಂಧಿ; ʼರಾಗಾʼ ಪರ ʼಮೋದಿʼ ವಿರುದ್ಧ ಘೋಷಣೆ.

ವಯನಾಡ್: ಬೃಹತ್‌ ರೋಡ್‌ ಶೋ ಮೂಲಕ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇಂದು ( ಏಪ್ರಿಲ್‌ 3 ) ನಾಮಪತ್ರ ಸಲ್ಲಿಸಿದರು.

ಪ್ರಸಕ್ತ ಲೋಕಸಭಾ ಚುನಾವಣೆಯಲ್ಲೂ ಕೇರಳದ ವಯನಾಡ್ ಕ್ಷೇತ್ರದಿಂದ ಕಣಕ್ಕಿಳಿದಿರುವ ರಾಹುಲ್‌ ಗಾಂಧಿ ಅವರು ನಾಮಪತ್ರ ಸಲ್ಲಿಸುವ ಮೊದಲು ಕ್ಷೇತ್ರದಾದ್ಯಂತ ಮೆಗಾ ರೋಡ್‌ ಶೋ ನಡೆಸಿದರು. ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಸಹ ಸಾಥ್‌ ನೀಡಿದರು.

ಹೆಲಿಕಾಪ್ಟರ್‌ ಮೂಲಕ ಇಂದು (ಏಪ್ರಿಲ್‌3) 10:30ಕ್ಕೆ ಕಣ್ಣೂರಿನಿಂದ ವಯಾನಂದ್‌ ಗ್ರಾಮದ ಮುಪ್ಪೈನಾಡ್‌ನಲ್ಲಿರುವ ಹೆಲಿಪ್ಯಾಡ್‌ಗೆ ಬಂದಿಳಿದರು. ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಹೆಲಿಪ್ಯಾಡ್‌ ಸುತ್ತಮುತ್ತ ಬೆಳಗ್ಗೆಯಿಂದಲೇ ಕಾಯುತ್ತಿದ್ದರು. ರೋಡ್‌ಶೋ ಆರಂಭವಾಗುತ್ತಿದ್ದಂತೆ ತೆರೆದ ವಾಹನದಲ್ಲಿ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಯವರು ಕಾರ್ಯಕರ್ತರತ್ತ ಕೈ ಬೀಸಿದರು.

ರಸ್ತೆ ಬದಿ ನೆರೆದಿದ್ದ ಸಾವಿರಾರು ಜನರು ರಾಹುಲ್‌ ಗಾಂಧಿ ಪರ ಘೋಷಣೆ ಕೂಗಿದರು. ಜೊತೆಗೆ ʼಡೌನ್‌ ಡೌನ್‌ ನರೇಂದ್ರ ಮೋದಿʼ ಅಂತಲೂ ಘೋಷಣೆ ಕೂಗಿದರು.

ಮೆರವಣಿಗೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್‌, ದೀಪಾ ದಾಸ್‌, ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಎಐಸಿಸಿ ಉಸ್ತುವಾರಿ ಕನ್ಹಯ್ಯಾ ಕುಮಾರ್‌, ಕೆಪಿಸಿಸಿ ಹಂಗಾಮಿ ಅಧ್ಯಕ್ಷ ಎಂ.ಎಂ ಹಾಸನ್‌ ರಾಹುಲ್‌ ಗಾಂಧಿ, ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಡಿ ಸತೀಶನ್‌ ಮತ್ತಿತರ ಮುಖಂಡರು ಇದ್ದರು.

ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಇದೇ ರಾಹುಲ್‌ ಗಾಂಧಿ ಒಟ್ಟು 7,06,367 ಮತ ಗಳಿಸುವ ಮೂಲಕ ಪ್ರತಿಸ್ಪರ್ಥಿ ಸಿಪಿಐ ಅಭ್ಯರ್ಥಿಯನ್ನು ಸೋಲಿಸಿದರು. ಕೇರಳದ ವಯನಾಡ್‌ ಕ್ಷೇತ್ರಕ್ಕೂ ಏಪ್ರಿಲ್‌ 26 ರಂದು ಚುನಾವಣೆ ನಡೆಯಲಿದೆ.

andolana

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

2 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

15 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

15 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

15 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

15 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

15 hours ago