ನವದೆಹಲಿ: ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಕಳೆದ 2018ರಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಕೈ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.
ಇಂದಿನ ವಿಚಾರಣೆ ವೇಳೆ ರಾಹುಲ್ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು. ಪ್ರಕರಣದಲ್ಲಿ ಮೂರನೇ ವ್ಯಕ್ತಿಯಿಂದ ದೂರು ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ದೂರು ದಾಖಲಿಸಿರುವುದನ್ನು ಅನುಮತಿಸಬಾರದು ಎಂದು ವಾದ ಮಂಡಿಸಿದರು.
ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ಅಂತಿಮವಾಗಿ ಕೋರ್ಟ್ ಜಾರ್ಖಂಡ್ ಸರ್ಕಾರ ಮತ್ತು ದೂರುದಾರರಿಗೆ ನೋಟಿಸ್ ನೀಡಿದೆ. ಮುಂದಿನ ಆದೇಶದವರೆಗೆ ವಿಚಾರಣೆಯಲ್ಲಿನ ಎಲ್ಲಾ ಪ್ರಕ್ರಿಯೆಗಳು ತಡೆಹಿಡಿಯಲ್ಪಡುತ್ತವೆ ಎಂದು ಹೇಳಿದೆ.
ಕಳೆದ 2018ರ ಮಾರ್ಚ್.18ರಂದು ಜಾರ್ಖಂಡ್ನಲ್ಲಿ ನಡೆದಿದ್ದ ಸಭೆಯೊಂದರಲ್ಲಿ ರಾಹುಲ್ ಗಾಂಧಿ ಭಾಷಣ ಮಾಡುತ್ತಿದ್ದ ವೇಳೆ ಅಮಿತ್ ಶಾ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಅಮಿತ್ ಶಾ ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದ್ದರು. ಈ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಮುಖಂಡ ನವೀನ್ ಝಾ, ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ್ದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…