ದೇಶ- ವಿದೇಶ

ಸಂಸತ್‌ ಆವರಣದಲ್ಲಿ ಮೋದಿ-ಅದಾನಿ ಅಣಕು: ಸಂದರ್ಶನ ಮಾಡಿದ ವಿಪಕ್ಷ ನಾಯಕ ರಾಹುಲ್‌ ಗಾಂಧಿ

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಸಂಸತ್‌ ಆವರಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಈ ವೇಳೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಪ್ರಧಾನಿ ಮೋದಿ ಹಾಗೂ ಅದಾನಿ ಮುಖವಾಡ ಧರಿಸಿದ್ದ ವ್ಯಕ್ತಿಯನ್ನು ಸಂದರ್ಶನ ಮಾಡಿದ್ದಾರೆ.

ಸಂಸತ್‌ ಭವನದ ಆವರಣದಲ್ಲಿ ಇಂದು(ಡಿ.9) ವಿರೋಧ ಪಕ್ಷ ನಾಯಕ ರಾಹುಲ್‌ ಗಾಂಧಿ, ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಇನ್ನಿತರ ವಿರೋಧ ಪಕ್ಷಗಳು ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯ ವೇಳೆ ಮೋದಿ ಅದಾನಿ ಏಕ್‌ ಹೈ ಎಂದು ಘೋಷಣೆಗಳನ್ನು ಕೂಗಿದ್ದಾರೆ.

ಈ ವೇಳೆ ರಾಹುಲ್‌ ಗಾಂಧಿ ಅವರು, ಅದಾನಿ ಮುಖವಾಡ ಧರಿಸಿದ್ದ ನಾಯಕನ ಬಳಿ ಅಣಕು ಸಂದರ್ಶನ ಮಾಡಿ ಸಂಸತ್ತಿನ ಕಲಾಪಗಲು ಯಾಕೆ ಸುಗಮವಾಗಿ ನಡೆಯಲು ಬಿಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಉತ್ತರ ನೀಡಿದ ನಾಯಕ ಪ್ರತಿಕ್ರಿಯಿಸಿ ಅದನ್ನು ನಾವು ಅಮಿತ್‌ ಶಾ ಅವರನ್ನು ಕೇಳಬೇಕು. ಅವರು ಸಂಸತ್‌ ಸದನ ಕಲಾಪದಿಂದ ಕಾಣೆಯಾಗಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ಇಬ್ಬರ ಹತ್ತಿರ ಮೋದಿ, ಅದಾನಿ ನಡುವಿನ ಸಂಬಂಧದ ಬಗ್ಗೆ ಕೇಳಿದಾಗ ಆ ನಾಯಕರು ನಾವಿಬ್ಬರೂ ಒಂದೇ, ನಾನು ಹೇಳುವುದನ್ನೇ ಮೋದಿ ಅವರು ಪಾಲಿಸುತ್ತಾರೆ. ಅದು ವಿಮಾನ ನಿಲ್ದಾಣವೇ ಆಗಿರಲಿ ಅಥವಾ ಬೇರೆ ಏನೇ ಆಗಿರಲಿ ಎಂದು ಉತ್ತರ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

10 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

11 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

11 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

12 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

12 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

13 hours ago