ಭೋಪಾಲ್: ಕ್ರಿಕೆಟ್ನಲ್ಲಿ ಮಹೇಂದ್ರ ಸಿಂಗ್ ಧೋನಿ ಅವರಂತೆಯೇ ಕಾಂಗ್ರೆಸ್ ಮುಖಂಡ ರಾಹುಲ್ಗಾಂಧಿ ಅವರು ಭಾರತ ರಾಜಕೀಯಕ್ಕೆ ಅತ್ಯುತ್ತಮ ಫಿನಿಷರ್ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ರಾಹುಲ್ ಗಾಂಧಿಯ ಕಾಲೆಳೆದಿದ್ದಾರೆ.
ಮಧ್ಯಪ್ರದೇಶದ ಸಿದ್ಧಿ ಜಿಲ್ಲೆಯಲ್ಲಿ ಶನಿವಾರ (ಏ.೬) ಚುನಾವಣಾ ಪ್ರಚಾರದಲ್ಲಿ ಮಾತನಾಡಿ, ಭಾರತದ ರಾಜಕೀಯದಲ್ಲಿ ಒಂದು ಕಾಲದಲ್ಲಿ ಕಾಂಗ್ರೆಸ್ ಪ್ರಭಾವ ಹೆಚ್ಚಿತ್ತು. ಆದರೆ ಸದ್ಯ 2 ರಿಂದ 3 ಚಿಕ್ಕ ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಹೀಗೇಕೆ ಆಯಿತು ಎಂದು ಯೋಜಿಸಿದ ನಾನು, ಈ ಅನಿಸಿಕೆಗೆ ಬಂದಿದ್ದೇನೆ, ಕ್ರಿಕೆಟ್ನಲ್ಲಿ ಪಂದ್ಯ ಅಂತ್ಯಗೊಳಿಸುವ ಧೋನಿ ತರ ಭಾರತೀಯ ರಾಜಕೀಯ ಪಂದ್ಯವನ್ನು ಉತ್ತಮವಾಗಿ ಅಂತ್ಯಗೊಳಿಸುವವರು ರಾಹುಲ್ ಗಾಂಧಿ ಎಂಬುದು ಸ್ಪಷ್ಟ. ಏಕೆಂದರೆ ಬಹಳಷ್ಟು ನಾಯಕರು ಆ ಪಕ್ಷ ತೊರೆದಿದ್ದಾರೆ ಎಂದು ರಾಜನಾಥ್ ಸಿಂಗ್ ಹೇಳಿದರು.
ರಾಹುಲ್ ಗಾಂಧಿ ಅವರು ಅತ್ಯಂತ ಹಳೆಯ ಪಕ್ಷವನ್ನು ಮುಗಿಸುವವರೆಗೂ ವಿಶ್ರಾಂತಿ ಪಡೆಯುವುದಿಲ್ಲ. ಭ್ರಷ್ಠಾಚಾರದೊಂದಿಗೆ ಬೇರ್ಪಡಿಸಲಾಗದ ಸಂಬಂಧವನ್ನು ಕಾಂಗ್ರೆಸ್ ಹೊಂದಿದೆ. ಕಾಂಗ್ರೆಸ್ನ ಬಹಳಷ್ಟು ನಾಯಕರು ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಯಾವುದೇ ಮಂತ್ರಿ ವಿರುದ್ಧ ಇಂಥ ಭ್ರಷ್ಟಾಚಾರದ ಆರೋಪವಿಲ್ಲ ಎಂದರು.
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…