ಭೋಪಾಲ್: ಕ್ರಿಕೆಟ್ನಲ್ಲಿ ಮಹೇಂದ್ರ ಸಿಂಗ್ ಧೋನಿ ಅವರಂತೆಯೇ ಕಾಂಗ್ರೆಸ್ ಮುಖಂಡ ರಾಹುಲ್ಗಾಂಧಿ ಅವರು ಭಾರತ ರಾಜಕೀಯಕ್ಕೆ ಅತ್ಯುತ್ತಮ ಫಿನಿಷರ್ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ರಾಹುಲ್ ಗಾಂಧಿಯ ಕಾಲೆಳೆದಿದ್ದಾರೆ.
ಮಧ್ಯಪ್ರದೇಶದ ಸಿದ್ಧಿ ಜಿಲ್ಲೆಯಲ್ಲಿ ಶನಿವಾರ (ಏ.೬) ಚುನಾವಣಾ ಪ್ರಚಾರದಲ್ಲಿ ಮಾತನಾಡಿ, ಭಾರತದ ರಾಜಕೀಯದಲ್ಲಿ ಒಂದು ಕಾಲದಲ್ಲಿ ಕಾಂಗ್ರೆಸ್ ಪ್ರಭಾವ ಹೆಚ್ಚಿತ್ತು. ಆದರೆ ಸದ್ಯ 2 ರಿಂದ 3 ಚಿಕ್ಕ ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಹೀಗೇಕೆ ಆಯಿತು ಎಂದು ಯೋಜಿಸಿದ ನಾನು, ಈ ಅನಿಸಿಕೆಗೆ ಬಂದಿದ್ದೇನೆ, ಕ್ರಿಕೆಟ್ನಲ್ಲಿ ಪಂದ್ಯ ಅಂತ್ಯಗೊಳಿಸುವ ಧೋನಿ ತರ ಭಾರತೀಯ ರಾಜಕೀಯ ಪಂದ್ಯವನ್ನು ಉತ್ತಮವಾಗಿ ಅಂತ್ಯಗೊಳಿಸುವವರು ರಾಹುಲ್ ಗಾಂಧಿ ಎಂಬುದು ಸ್ಪಷ್ಟ. ಏಕೆಂದರೆ ಬಹಳಷ್ಟು ನಾಯಕರು ಆ ಪಕ್ಷ ತೊರೆದಿದ್ದಾರೆ ಎಂದು ರಾಜನಾಥ್ ಸಿಂಗ್ ಹೇಳಿದರು.
ರಾಹುಲ್ ಗಾಂಧಿ ಅವರು ಅತ್ಯಂತ ಹಳೆಯ ಪಕ್ಷವನ್ನು ಮುಗಿಸುವವರೆಗೂ ವಿಶ್ರಾಂತಿ ಪಡೆಯುವುದಿಲ್ಲ. ಭ್ರಷ್ಠಾಚಾರದೊಂದಿಗೆ ಬೇರ್ಪಡಿಸಲಾಗದ ಸಂಬಂಧವನ್ನು ಕಾಂಗ್ರೆಸ್ ಹೊಂದಿದೆ. ಕಾಂಗ್ರೆಸ್ನ ಬಹಳಷ್ಟು ನಾಯಕರು ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಯಾವುದೇ ಮಂತ್ರಿ ವಿರುದ್ಧ ಇಂಥ ಭ್ರಷ್ಟಾಚಾರದ ಆರೋಪವಿಲ್ಲ ಎಂದರು.
ಕುಶಾಲನಗರ: ಪುರಸಭೆ ವ್ಯಾಪ್ತಿಯ ಎರಡನೇ ವಾರ್ಡ್ನ ನಿಂಗೇಗೌಡ ಬಡಾವಣೆಯ ರಸ್ತೆಯ ಕಾಮಗಾರಿ ಉದ್ಘಾಟನೆಗೆ ಬಂದ ಶಾಸಕರು ಕಾಮಗಾರಿ ವೀಕ್ಷಿಸಿ ಅತೃಪ್ತಗೊಂಡು…
ಕೋಟಿ ಕೋಟಿ ಹಣವಿದ್ದರೂ ನೆಮ್ಮದಿಯ ಸಂಬಂಧಗಳು ಇಲ್ಲದಿದ್ದರೆ ಜೀವನ ನಿರರ್ಥಕ. ಐಷಾರಾಮಿ ಬದುಕು ಎಂಬುದು ಸೌಕರ್ಯಗಳನ್ನು ನೀಡಬಲ್ಲದೇ ಹೊರತು, ಶಾಶ್ವತ…
ಜಾನಪದ ತವರೂರಾದ ಚಾಮರಾಜನಗರದ ನಂದಿ ಭವನ ರಸ್ತೆಯ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಮೋರಿ (ಡ್ರೈನೇಜ್)ಯಲ್ಲಿ ಸ್ವಚ್ಛತೆ ಇಲ್ಲದೆ ತ್ಯಾಜ್ಯ…
ಹಿರಿಯ ನಟಿ, ನಿರ್ಮಾಪಕಿ, ಮಾಜಿ ಸಚಿವೆ ಡಾ.ಜಯಮಾಲ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ೨ನೇ ಬಾರಿಗೆ ಆಯ್ಕೆಯಾಗಿರುವುದು…
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ನಲ್ಲಿ ಕಳೆದ ಮೂರು ವರ್ಷಗಳಿಂದ ನಡೆದಿರುವ ಅಧಿಕಾರ…
ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…