ದೇಶ- ವಿದೇಶ

ಮಲ್ಲಿಕಾರ್ಜುನ ಖರ್ಗೆ ಭುಜಕ್ಕೆ ಮಸಾಜ್‌ ಮಾಡಿದ ರಾಹುಲ್‌ ಗಾಂಧಿ! ವಿಡಿಯೊ ವೈರಲ್‌… ಇಂಟರ್‌ನೆಟ್‌ ಓದುಗರಿಂದಲೂ ಪ್ರಶಂಸೆ…

ಹೊಸದಿಲ್ಲಿ : ಸಂಸತ್ ಭವನದಲ್ಲಿ ನಡೆದ ವಿಶೇಷ ಘಟನೆಯೊಂದು ಗಮನ ಸೆಳೆದಿದೆ. ಭುಜದ ನೋವಿನಿಂದ ಬಳಲುತ್ತಿದ್ದ ಮಲ್ಲಿಕಾರ್ಜುನ ಖರ್ಗೆಯವರಿಗೆ ರಾಹುಲ್ ಗಾಂಧಿಯವರು ಭುಜವನ್ನು ಒತ್ತಿ ವಿಶ್ರಾಂತಿ ನೀಡಿದ್ದಾರೆ. ಈ ದೃಶ್ಯದ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಪ್ರಿಯಾಂಕಾ ಗಾಂಧಿಯವರೂ ಖರ್ಗೆಯವರಿಗೆ ಭುಜದ ಮಸಾಜ್‌ನ ಮಹತ್ವ ತಿಳಿಸಿದ್ದಾರೆ. ಈ ಘಟನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸಮಾರಂಭವೊಂದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಅವರ ನಡೆಯೊಂದು ಸಂಸತ್ ಭವನದಲ್ಲಿ ಡಿ. 3ರಂದು ಒಂದು ಅಪರೂಪದ ಘಟನೆಗೆ ಸಾಕ್ಷಿಯಾಯಿತು. ಭುಜದ ನೋವಿನಿಂದ ಬಳಲುತ್ತಿದ್ದ ರಾಜ್ಯಸಭೆಯ ವಿಪಕ್ಷಗಳ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಲೋಕಸಭಾ ಸದಸ್ಯ ರಾಹುಲ್ ಗಾಂಧಿಯವರು ಭುಜ ಒತ್ತುತ್ತಿರುವುದು ಕಂಡುಬಂತು. ಮಾಧ್ಯಮದವರು ಅದರ ವಿಡಿಯೋವನ್ನು ಮಾಡಿದ್ದು ಅದು ಉತ್ತಮ ಶೀರ್ಷಿಕೆಯೊಂದಿಗೆ ನಾನಾ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಇಂಟರ್ ನೆಟ್ ಓದುಗರಿಂದ ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದನ್ನು ಓದಿ: ಇಂದು ಸಂಜೆ ಪುಟಿನ್‌ ಭಾರತಕ್ಕೆ ಆಗಮನ : ಮೋದಿಯಿಂದ ಖಾಸಗಿ ಔತಣಕೂಟ

ಭಾರತದ ಮೊದಲ ರಾಷ್ಟ್ರಪತಿ ಬಾಬು ರಾಜೇಂದ್ರ ಪ್ರಸಾದ್ ಅವರ ಜನ್ಮದಿನಾಚರಣೆಯ ಅಂಗವಾಗಿ, ಸಂಸತ್ ಭವನದಲ್ಲಿ ಅವರ ಫೋಟೋಕ್ಕೆ ಪುಷ್ಪನಮನ ಸಲ್ಲಿಸಲು ಏರ್ಪಾಟು ಮಾಡಲಾಗಿತ್ತು. ಸರದಿ ಸಾಲಿನಲ್ಲಿ ಪುಷ್ಪನಮನ ಸಲ್ಲಿಸಿ ಬರಬೇಕಿತ್ತು. ಆ ಸಂದರ್ಭದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ಆಸನದಲ್ಲಿ ಕುಳಿತುಕೊಂಡರು. ಅಲ್ಲಿಗೆ ಬಂದ ರಾಹುಲ್ ಗಾಂಧಿ, ಖರ್ಗೆಯವರ ಹಿಂದೆ ನಿಂತು ಅವರ ಭುಜಗಳ ಮೇಲೆ ತಮ್ಮೆರಡೂ ಕೈಗಳನ್ನಿಟ್ಟು ನಿಧಾನವಾಗಿ ಒತ್ತಲಾರಂಭಿಸಿದರು.

ಬಹುಶಃ ಅದು ಖರ್ಗೆಯವರಿಗೆ ಆರಾಮ ಎನಿಸಿರಬೇಕು. ಆಗ ಖರ್ಗೆಯವರೂ ತಮ್ಮ ಭುಜಗಳನ್ನು ಮಸಾಜ್ ಗೆ ತಕ್ಕಂತೆ ಸರಿಯಾಗಿ ಹೊಂದಿಸುತ್ತಾ ಕೊಂಚ ರಿಲ್ಯಾಕ್ಸ್ ಆದರು. ಅಷ್ಟರಲ್ಲಿ ಸ್ಥಳಕ್ಕೆ ಆಗಮಿಸಿದ ಕೇರಳದ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ, ಖರ್ಗೆಯವರ ಭುಜವನ್ನು ರಾಹುಲ್ ಒತ್ತುತ್ತಿರುವುದನ್ನು ನೋಡಿ ನಸುನಕ್ಕರಲ್ಲದೆ, ಖರ್ಗೆಯವರ ಬಳಿ ಭುಜದ ಮಸಾಜ್ ನ ಅನುಕೂಲಗಳ ಬಗ್ಗೆ ಒಂದಿಷ್ಟು ಮಾತನಾಡಿದರು. ತಮ್ಮ ಕೈಗಳಿಂದ ತಮ್ಮ ಬಲಭುಜವನ್ನು ತೋರಿಸುತ್ತಾ ಭುಜದ ಯಾವ ಖಂಡಗಳು ಹೇಗೆ ಕೆಲಸ ಮಾಡುತ್ತವೆ, ಭುಜದ ಮಸಾಜ್ ನಿಂದ ಬೆನ್ನು, ಪಕ್ಕೆಲುಬುಗಳಿಗೆ ಹೇಗೆ ಆರಾಮವಾಗುತ್ತದೆ ಎಂಬುದನ್ನು ಅವರು ತೋರಿಸಿದರು. ದೂರದಿಂದ ಇವರ ಮಾತುಕತೆಯನ್ನು ಗಮನಿಸುತ್ತಿದ್ದ ಮಾಧ್ಯಮಗಳು ಈ ದೃಶ್ಯಗಳನ್ನು ತಮ್ಮ ಕ್ಯಾಮೆರಾಗಳಲ್ಲಿ ಸೆರೆಹಿಡಿದಿವೆ. ಇದರ ವಿಡಿಯೋ ಕ್ಲಿಪ್ ಗಳು ನಾನಾ ವೆಬ್ ಸೈಟ್ ಗಳಲ್ಲಿ ಪ್ರಕಟವಾಗಿದ್ದು ಆ ದೃಶ್ಯಾವಳಿಗಳು ಇಂಟರ್ ನೆಟ್ ನಲ್ಲಿ, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಇದರ ಬಗ್ಗೆ ಅನೇಕರು ಖುಷಿ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 mins ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

6 mins ago

ಹಾರಂಗಿ ಸಾಕಾನೆ ಶಿಬಿರ ಪ್ರವಾಸಿಗರಿಗೆ ಮುಕ್ತ

ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…

11 mins ago

ಕ್ವಾರಿ, ಕ್ರಷರ್‌ಗಳ ಬಂದ್; ನಿರ್ಮಾಣ ವಲಯಕ್ಕೆ ತಟ್ಟಿದ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…

17 mins ago

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

9 hours ago