ದೇಶ- ವಿದೇಶ

ಮಲ್ಲಿಕಾರ್ಜುನ ಖರ್ಗೆ ಭುಜಕ್ಕೆ ಮಸಾಜ್‌ ಮಾಡಿದ ರಾಹುಲ್‌ ಗಾಂಧಿ! ವಿಡಿಯೊ ವೈರಲ್‌… ಇಂಟರ್‌ನೆಟ್‌ ಓದುಗರಿಂದಲೂ ಪ್ರಶಂಸೆ…

ಹೊಸದಿಲ್ಲಿ : ಸಂಸತ್ ಭವನದಲ್ಲಿ ನಡೆದ ವಿಶೇಷ ಘಟನೆಯೊಂದು ಗಮನ ಸೆಳೆದಿದೆ. ಭುಜದ ನೋವಿನಿಂದ ಬಳಲುತ್ತಿದ್ದ ಮಲ್ಲಿಕಾರ್ಜುನ ಖರ್ಗೆಯವರಿಗೆ ರಾಹುಲ್ ಗಾಂಧಿಯವರು ಭುಜವನ್ನು ಒತ್ತಿ ವಿಶ್ರಾಂತಿ ನೀಡಿದ್ದಾರೆ. ಈ ದೃಶ್ಯದ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಪ್ರಿಯಾಂಕಾ ಗಾಂಧಿಯವರೂ ಖರ್ಗೆಯವರಿಗೆ ಭುಜದ ಮಸಾಜ್‌ನ ಮಹತ್ವ ತಿಳಿಸಿದ್ದಾರೆ. ಈ ಘಟನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸಮಾರಂಭವೊಂದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಅವರ ನಡೆಯೊಂದು ಸಂಸತ್ ಭವನದಲ್ಲಿ ಡಿ. 3ರಂದು ಒಂದು ಅಪರೂಪದ ಘಟನೆಗೆ ಸಾಕ್ಷಿಯಾಯಿತು. ಭುಜದ ನೋವಿನಿಂದ ಬಳಲುತ್ತಿದ್ದ ರಾಜ್ಯಸಭೆಯ ವಿಪಕ್ಷಗಳ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಲೋಕಸಭಾ ಸದಸ್ಯ ರಾಹುಲ್ ಗಾಂಧಿಯವರು ಭುಜ ಒತ್ತುತ್ತಿರುವುದು ಕಂಡುಬಂತು. ಮಾಧ್ಯಮದವರು ಅದರ ವಿಡಿಯೋವನ್ನು ಮಾಡಿದ್ದು ಅದು ಉತ್ತಮ ಶೀರ್ಷಿಕೆಯೊಂದಿಗೆ ನಾನಾ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಇಂಟರ್ ನೆಟ್ ಓದುಗರಿಂದ ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದನ್ನು ಓದಿ: ಇಂದು ಸಂಜೆ ಪುಟಿನ್‌ ಭಾರತಕ್ಕೆ ಆಗಮನ : ಮೋದಿಯಿಂದ ಖಾಸಗಿ ಔತಣಕೂಟ

ಭಾರತದ ಮೊದಲ ರಾಷ್ಟ್ರಪತಿ ಬಾಬು ರಾಜೇಂದ್ರ ಪ್ರಸಾದ್ ಅವರ ಜನ್ಮದಿನಾಚರಣೆಯ ಅಂಗವಾಗಿ, ಸಂಸತ್ ಭವನದಲ್ಲಿ ಅವರ ಫೋಟೋಕ್ಕೆ ಪುಷ್ಪನಮನ ಸಲ್ಲಿಸಲು ಏರ್ಪಾಟು ಮಾಡಲಾಗಿತ್ತು. ಸರದಿ ಸಾಲಿನಲ್ಲಿ ಪುಷ್ಪನಮನ ಸಲ್ಲಿಸಿ ಬರಬೇಕಿತ್ತು. ಆ ಸಂದರ್ಭದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ಆಸನದಲ್ಲಿ ಕುಳಿತುಕೊಂಡರು. ಅಲ್ಲಿಗೆ ಬಂದ ರಾಹುಲ್ ಗಾಂಧಿ, ಖರ್ಗೆಯವರ ಹಿಂದೆ ನಿಂತು ಅವರ ಭುಜಗಳ ಮೇಲೆ ತಮ್ಮೆರಡೂ ಕೈಗಳನ್ನಿಟ್ಟು ನಿಧಾನವಾಗಿ ಒತ್ತಲಾರಂಭಿಸಿದರು.

ಬಹುಶಃ ಅದು ಖರ್ಗೆಯವರಿಗೆ ಆರಾಮ ಎನಿಸಿರಬೇಕು. ಆಗ ಖರ್ಗೆಯವರೂ ತಮ್ಮ ಭುಜಗಳನ್ನು ಮಸಾಜ್ ಗೆ ತಕ್ಕಂತೆ ಸರಿಯಾಗಿ ಹೊಂದಿಸುತ್ತಾ ಕೊಂಚ ರಿಲ್ಯಾಕ್ಸ್ ಆದರು. ಅಷ್ಟರಲ್ಲಿ ಸ್ಥಳಕ್ಕೆ ಆಗಮಿಸಿದ ಕೇರಳದ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ, ಖರ್ಗೆಯವರ ಭುಜವನ್ನು ರಾಹುಲ್ ಒತ್ತುತ್ತಿರುವುದನ್ನು ನೋಡಿ ನಸುನಕ್ಕರಲ್ಲದೆ, ಖರ್ಗೆಯವರ ಬಳಿ ಭುಜದ ಮಸಾಜ್ ನ ಅನುಕೂಲಗಳ ಬಗ್ಗೆ ಒಂದಿಷ್ಟು ಮಾತನಾಡಿದರು. ತಮ್ಮ ಕೈಗಳಿಂದ ತಮ್ಮ ಬಲಭುಜವನ್ನು ತೋರಿಸುತ್ತಾ ಭುಜದ ಯಾವ ಖಂಡಗಳು ಹೇಗೆ ಕೆಲಸ ಮಾಡುತ್ತವೆ, ಭುಜದ ಮಸಾಜ್ ನಿಂದ ಬೆನ್ನು, ಪಕ್ಕೆಲುಬುಗಳಿಗೆ ಹೇಗೆ ಆರಾಮವಾಗುತ್ತದೆ ಎಂಬುದನ್ನು ಅವರು ತೋರಿಸಿದರು. ದೂರದಿಂದ ಇವರ ಮಾತುಕತೆಯನ್ನು ಗಮನಿಸುತ್ತಿದ್ದ ಮಾಧ್ಯಮಗಳು ಈ ದೃಶ್ಯಗಳನ್ನು ತಮ್ಮ ಕ್ಯಾಮೆರಾಗಳಲ್ಲಿ ಸೆರೆಹಿಡಿದಿವೆ. ಇದರ ವಿಡಿಯೋ ಕ್ಲಿಪ್ ಗಳು ನಾನಾ ವೆಬ್ ಸೈಟ್ ಗಳಲ್ಲಿ ಪ್ರಕಟವಾಗಿದ್ದು ಆ ದೃಶ್ಯಾವಳಿಗಳು ಇಂಟರ್ ನೆಟ್ ನಲ್ಲಿ, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಇದರ ಬಗ್ಗೆ ಅನೇಕರು ಖುಷಿ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

10 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

10 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

10 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

10 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

10 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

13 hours ago