ದೇಶ- ವಿದೇಶ

ಸ್ವ ಕ್ಷೇತ್ರ ಅಮೇಠಿ ಬಿಟ್ಟು ರಾಯ್‌ಬರೇಲಿ ʼಕೈʼ ಹಿಡಿದ ರಾಗಾ: ಅಮೇಠಿಗೆ ಹೊಸ ಮುಖ?

ನವದೆಹಲಿ: ಉತ್ತರ ಪ್ರದೇಶದ ರಾಯಲ್‌ಬರೇಲಿ ಹಾಗೂ ಅಮೇಠಿ ಕ್ಷೇತ್ರಕ್ಕೆ ಕೊನೆಗೂ ತಮ್ಮ ಅಭ್ಯರ್ಥಿಗಳನ್ನು ಕಾಂಗ್ರೆಸ್‌ ಅಂತಿಮಗೊಳಿಸಿದೆ.

ಇಂದು (ಶುಕ್ರವಾರ, ಮೇ.3) ರಾಯ್‌ಬರೇಲಿ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸೋನಿಯಾ ಗಾಂಧಿ ಪುತ್ರ ರಾಹುಲ್‌ ಗಾಂಧಿ ಅವರ ಹೆಸರನ್ನು ಕಾಂಗ್ರೆಸ್‌ ಪ್ರಕಟಿಸಿದೆ. ಇದು ರಾಗಾ ಚುನಾವಣಾ ಕಣದಲ್ಲಿ ನಿಲ್ಲುತ್ತಿರುವ ಎರಡನೇ ಕ್ಷೇತ್ರವಾಗಿದೆ. ಇನ್ನು ಈ ಕ್ಷೇತ್ರವನ್ನು ಕಾಂಗ್ರಸ್‌ ಭದ್ರಕೋಟೆ ಎಂದು ಹೇಳಲಾಗುತ್ತಿದೆ.

ಕಿಶೋರಿಲಾಲ್‌ ಶರ್ಮಾ ಅವರಿಗೆ ಈ ಬಾರಿ ಕಾಂಗ್ರೆಸ್‌ ಮಣೆ ಹಾಕಿದ್ದು, ಇವರು ಈ ಬಾರಿ ಅಮೇಠಿಯಿಂದ ಸ್ಪರ್ಧೆ ಮಾಡಲಿದ್ದಾರೆ. ಕಿಶೋರಿ ಲಾಲ್‌ ಅವರು ಗಾಂಧಿ ಕುಟುಂಬಕ್ಕೆ ಬಹಳ ಆಪ್ತರಾಗಿದ್ದಾರೆ.

2019ರ ಲೋಕಸಭಾ ಚುನಾವಣೆ ವೇಳೆ ಕೇರಳದ ವಯನಾಡ್‌ ಹಾಗೂ ಅಮೇಠಿಯಿಂದ ಚುನಾವಣೆ ಎದುರಿಸಿದ್ದ ರಾಹುಲ್‌ ಗಾಂಧಿ ವಯಾಡಿನಲ್ಲಿ ಭರ್ಜರಿಯ ಗೆಲುವು ದಾಖಲಿಸಿದರೇ, ಅಮೇಠಿಯಲ್ಲಿ ಸ್ಮೃತಿ ಇರಾನಿ ಮುಂದೆ ಸೋಲು ಕಂಡಿದ್ದರು. ಕಳೆದ ಬಾರಿಯಂತೆ ಈ ಬಾರಿಯೂ ರಾಹುಲ್‌ ಗಾಂಧಿ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿತ್ತು.

2004ರಿಂದ ರಾಯ್‌ ಬರೇಲಿಯಲ್ಲಿ ಸ್ಪರ್ಧೆ ಮಾಡುತ್ತಿದ್ದ ಸೋನಿಯಾ ಗಾಂಧಿ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾದ ಬೆನ್ನಲ್ಲೇ ತಮ್ಮ ತಾಯಿ ಕ್ಷೇತ್ರವಾದ ರಾಯ್‌ ಬರೇಲಿಯಲ್ಲಿ ರಾಹುಲ್‌ ಗಾಂಧಿ ಸ್ಪರ್ಧೇ ಮಾಡಿದ್ದಾರೆ. ಇನ್ನು ತಮ್ಮ ಕ್ಷೇತ್ರವಾದ ಅಮೇಠಿಯನ್ನು ತಮ್ಮ ಕುಟುಂಬದ ಆಪ್ತ ಶರ್ಮಾ ಅವರಿಗೆ ಬಿಟ್ಟುಕೊಟ್ಟಿದ್ದಾರೆ.

ಈ ಎರಡು ಕ್ಷೇತ್ರಗಳಿಗೂ ನಾಮಪತ್ರ ಸಲ್ಲಿಸಲು ಇಂದು (ಶುಕ್ರವಾರ) ಕೊನೆಯ ದಿನವಾಗಿತ್ತು. ಇಂದೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ಎರಡು ಕ್ಷೇತ್ರಗಳಿಗೂ ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ ಕಾಂಗ್ರೆಸ್‌ ಅಭ್ಯರ್ಥಿಗಳು.

ಈ ಕ್ಷೇತ್ರಗಳಿಗೆ ಮೇ. 20 ರಂದು ಮತದಾನ ನಡೆಯಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

7 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

7 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

7 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

7 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

7 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

7 hours ago