ದೇಶ- ವಿದೇಶ

ಸ್ವ ಕ್ಷೇತ್ರ ಅಮೇಠಿ ಬಿಟ್ಟು ರಾಯ್‌ಬರೇಲಿ ʼಕೈʼ ಹಿಡಿದ ರಾಗಾ: ಅಮೇಠಿಗೆ ಹೊಸ ಮುಖ?

ನವದೆಹಲಿ: ಉತ್ತರ ಪ್ರದೇಶದ ರಾಯಲ್‌ಬರೇಲಿ ಹಾಗೂ ಅಮೇಠಿ ಕ್ಷೇತ್ರಕ್ಕೆ ಕೊನೆಗೂ ತಮ್ಮ ಅಭ್ಯರ್ಥಿಗಳನ್ನು ಕಾಂಗ್ರೆಸ್‌ ಅಂತಿಮಗೊಳಿಸಿದೆ.

ಇಂದು (ಶುಕ್ರವಾರ, ಮೇ.3) ರಾಯ್‌ಬರೇಲಿ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸೋನಿಯಾ ಗಾಂಧಿ ಪುತ್ರ ರಾಹುಲ್‌ ಗಾಂಧಿ ಅವರ ಹೆಸರನ್ನು ಕಾಂಗ್ರೆಸ್‌ ಪ್ರಕಟಿಸಿದೆ. ಇದು ರಾಗಾ ಚುನಾವಣಾ ಕಣದಲ್ಲಿ ನಿಲ್ಲುತ್ತಿರುವ ಎರಡನೇ ಕ್ಷೇತ್ರವಾಗಿದೆ. ಇನ್ನು ಈ ಕ್ಷೇತ್ರವನ್ನು ಕಾಂಗ್ರಸ್‌ ಭದ್ರಕೋಟೆ ಎಂದು ಹೇಳಲಾಗುತ್ತಿದೆ.

ಕಿಶೋರಿಲಾಲ್‌ ಶರ್ಮಾ ಅವರಿಗೆ ಈ ಬಾರಿ ಕಾಂಗ್ರೆಸ್‌ ಮಣೆ ಹಾಕಿದ್ದು, ಇವರು ಈ ಬಾರಿ ಅಮೇಠಿಯಿಂದ ಸ್ಪರ್ಧೆ ಮಾಡಲಿದ್ದಾರೆ. ಕಿಶೋರಿ ಲಾಲ್‌ ಅವರು ಗಾಂಧಿ ಕುಟುಂಬಕ್ಕೆ ಬಹಳ ಆಪ್ತರಾಗಿದ್ದಾರೆ.

2019ರ ಲೋಕಸಭಾ ಚುನಾವಣೆ ವೇಳೆ ಕೇರಳದ ವಯನಾಡ್‌ ಹಾಗೂ ಅಮೇಠಿಯಿಂದ ಚುನಾವಣೆ ಎದುರಿಸಿದ್ದ ರಾಹುಲ್‌ ಗಾಂಧಿ ವಯಾಡಿನಲ್ಲಿ ಭರ್ಜರಿಯ ಗೆಲುವು ದಾಖಲಿಸಿದರೇ, ಅಮೇಠಿಯಲ್ಲಿ ಸ್ಮೃತಿ ಇರಾನಿ ಮುಂದೆ ಸೋಲು ಕಂಡಿದ್ದರು. ಕಳೆದ ಬಾರಿಯಂತೆ ಈ ಬಾರಿಯೂ ರಾಹುಲ್‌ ಗಾಂಧಿ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿತ್ತು.

2004ರಿಂದ ರಾಯ್‌ ಬರೇಲಿಯಲ್ಲಿ ಸ್ಪರ್ಧೆ ಮಾಡುತ್ತಿದ್ದ ಸೋನಿಯಾ ಗಾಂಧಿ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾದ ಬೆನ್ನಲ್ಲೇ ತಮ್ಮ ತಾಯಿ ಕ್ಷೇತ್ರವಾದ ರಾಯ್‌ ಬರೇಲಿಯಲ್ಲಿ ರಾಹುಲ್‌ ಗಾಂಧಿ ಸ್ಪರ್ಧೇ ಮಾಡಿದ್ದಾರೆ. ಇನ್ನು ತಮ್ಮ ಕ್ಷೇತ್ರವಾದ ಅಮೇಠಿಯನ್ನು ತಮ್ಮ ಕುಟುಂಬದ ಆಪ್ತ ಶರ್ಮಾ ಅವರಿಗೆ ಬಿಟ್ಟುಕೊಟ್ಟಿದ್ದಾರೆ.

ಈ ಎರಡು ಕ್ಷೇತ್ರಗಳಿಗೂ ನಾಮಪತ್ರ ಸಲ್ಲಿಸಲು ಇಂದು (ಶುಕ್ರವಾರ) ಕೊನೆಯ ದಿನವಾಗಿತ್ತು. ಇಂದೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ಎರಡು ಕ್ಷೇತ್ರಗಳಿಗೂ ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ ಕಾಂಗ್ರೆಸ್‌ ಅಭ್ಯರ್ಥಿಗಳು.

ಈ ಕ್ಷೇತ್ರಗಳಿಗೆ ಮೇ. 20 ರಂದು ಮತದಾನ ನಡೆಯಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

3 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

3 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

3 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

3 hours ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

6 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

11 hours ago