rahulgandhi
ನವದೆಹಲಿ: ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು ಹಿಡಿದು ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಸೂಚಿಸಿದ ಸುಪ್ರೀಂಕೋರ್ಟ್ ನಿರ್ದೇಶನವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರೋಧಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಈ ನಿರ್ಧಾರವು ಹಲವು ವರ್ಷಗಳಿಂದ ಅನುಸರಿಸುತ್ತಿರುವ ಮಾನವೀಯ ಹಾಗೂ ವಿಜ್ಞಾನಾಧಾರಿತ ನೀತಿಯಿಂದ ಹಿಂದಕ್ಕೆ ಸರಿದಂತಾಗಿದೆ. ಮೂಖ ಜೀವಿಗಳು ಅಳಿಸಬೇಕಾದ ಸಮಸ್ಯೆಗಳಲ್ಲ. ಶಸ್ತ್ರಚಿಕಿತ್ಸೆ, ಲಸಿಕೆ ಹಾಗೂ ಸಮುದಾಯದ ಕಾಳಜಿ ಮೂಲಕ ಬೀದಿ ನಾಯಿಗಳನ್ನು ಕ್ರೂರತೆ ಇಲ್ಲದೆ ಸುರಕ್ಷಿತವಾಗಿರಿಸಬಹುದು ಎಂದು ಹೇಳಿದ್ದಾರೆ.
ಸಾಮೂಹಿಕವಾಗಿ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವುದು ಕ್ರೂರ, ದೂರದೃಷ್ಟಿಯಿಲ್ಲದ ಕ್ರಮವಾಗಿದೆ. ಸುಪ್ರೀಂಕೋರ್ಟ್ ಮಾನವೀಯತೆ ಹಾಗೂ ಸಹಾನುಭೂತಿಯಿಲ್ಲದೇ ಕಾನೂನನ್ನು ಪಕ್ಕಕ್ಕೆ ಸರಿಸಿದೆ. ಸಾರ್ವಜನಿಕ ಸುರಕ್ಷತೆ ಹಾಗೂ ಪ್ರಾಣಿಗಳ ಕಾಳಜಿ ಎರಡನ್ನೂ ಒಟ್ಟಿಗೆ ಮಾಡಬಹುದು ಎಂದು ಹೇಳಿದ್ದಾರೆ.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…