rahulgandhi
ನವದೆಹಲಿ: ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು ಹಿಡಿದು ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಸೂಚಿಸಿದ ಸುಪ್ರೀಂಕೋರ್ಟ್ ನಿರ್ದೇಶನವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರೋಧಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಈ ನಿರ್ಧಾರವು ಹಲವು ವರ್ಷಗಳಿಂದ ಅನುಸರಿಸುತ್ತಿರುವ ಮಾನವೀಯ ಹಾಗೂ ವಿಜ್ಞಾನಾಧಾರಿತ ನೀತಿಯಿಂದ ಹಿಂದಕ್ಕೆ ಸರಿದಂತಾಗಿದೆ. ಮೂಖ ಜೀವಿಗಳು ಅಳಿಸಬೇಕಾದ ಸಮಸ್ಯೆಗಳಲ್ಲ. ಶಸ್ತ್ರಚಿಕಿತ್ಸೆ, ಲಸಿಕೆ ಹಾಗೂ ಸಮುದಾಯದ ಕಾಳಜಿ ಮೂಲಕ ಬೀದಿ ನಾಯಿಗಳನ್ನು ಕ್ರೂರತೆ ಇಲ್ಲದೆ ಸುರಕ್ಷಿತವಾಗಿರಿಸಬಹುದು ಎಂದು ಹೇಳಿದ್ದಾರೆ.
ಸಾಮೂಹಿಕವಾಗಿ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವುದು ಕ್ರೂರ, ದೂರದೃಷ್ಟಿಯಿಲ್ಲದ ಕ್ರಮವಾಗಿದೆ. ಸುಪ್ರೀಂಕೋರ್ಟ್ ಮಾನವೀಯತೆ ಹಾಗೂ ಸಹಾನುಭೂತಿಯಿಲ್ಲದೇ ಕಾನೂನನ್ನು ಪಕ್ಕಕ್ಕೆ ಸರಿಸಿದೆ. ಸಾರ್ವಜನಿಕ ಸುರಕ್ಷತೆ ಹಾಗೂ ಪ್ರಾಣಿಗಳ ಕಾಳಜಿ ಎರಡನ್ನೂ ಒಟ್ಟಿಗೆ ಮಾಡಬಹುದು ಎಂದು ಹೇಳಿದ್ದಾರೆ.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…