rahulgandhi
ನವದೆಹಲಿ: ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು ಹಿಡಿದು ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಸೂಚಿಸಿದ ಸುಪ್ರೀಂಕೋರ್ಟ್ ನಿರ್ದೇಶನವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರೋಧಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಈ ನಿರ್ಧಾರವು ಹಲವು ವರ್ಷಗಳಿಂದ ಅನುಸರಿಸುತ್ತಿರುವ ಮಾನವೀಯ ಹಾಗೂ ವಿಜ್ಞಾನಾಧಾರಿತ ನೀತಿಯಿಂದ ಹಿಂದಕ್ಕೆ ಸರಿದಂತಾಗಿದೆ. ಮೂಖ ಜೀವಿಗಳು ಅಳಿಸಬೇಕಾದ ಸಮಸ್ಯೆಗಳಲ್ಲ. ಶಸ್ತ್ರಚಿಕಿತ್ಸೆ, ಲಸಿಕೆ ಹಾಗೂ ಸಮುದಾಯದ ಕಾಳಜಿ ಮೂಲಕ ಬೀದಿ ನಾಯಿಗಳನ್ನು ಕ್ರೂರತೆ ಇಲ್ಲದೆ ಸುರಕ್ಷಿತವಾಗಿರಿಸಬಹುದು ಎಂದು ಹೇಳಿದ್ದಾರೆ.
ಸಾಮೂಹಿಕವಾಗಿ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವುದು ಕ್ರೂರ, ದೂರದೃಷ್ಟಿಯಿಲ್ಲದ ಕ್ರಮವಾಗಿದೆ. ಸುಪ್ರೀಂಕೋರ್ಟ್ ಮಾನವೀಯತೆ ಹಾಗೂ ಸಹಾನುಭೂತಿಯಿಲ್ಲದೇ ಕಾನೂನನ್ನು ಪಕ್ಕಕ್ಕೆ ಸರಿಸಿದೆ. ಸಾರ್ವಜನಿಕ ಸುರಕ್ಷತೆ ಹಾಗೂ ಪ್ರಾಣಿಗಳ ಕಾಳಜಿ ಎರಡನ್ನೂ ಒಟ್ಟಿಗೆ ಮಾಡಬಹುದು ಎಂದು ಹೇಳಿದ್ದಾರೆ.
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…