ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು.
ಈ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ, ಸೇನಾ ತಿಕ್ಕಾಟವನ್ನು ಪ್ರಧಾನಿ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಿಭಾಯಿಸಿದ್ದ ರೀತಿಯ ಬಗ್ಗೆ ಈ ಅಪ್ರಕಟಿತ ಪುಸ್ತಕಗಳಲ್ಲಿ ಪ್ರಶ್ನೆಗಳನ್ನು ಎತ್ತಲಾಗಿದೆ ಎಂದು ಗೊತ್ತಾಗಿದೆ ಎಂದು ಹೇಳಿದರು.
ಸೇನೆಯ ಮಾಜಿ ಮುಖ್ಯಸ್ಥರ ಪುಸ್ತಕದ ಒಂದೆರಡು ಸಾಲನ್ನು ಪ್ರಸ್ತಾಪಿಸಲು ಬಯಸಿದ್ದೇನೆ. ಆದರೆ ಅದಕ್ಕೆ ಸರ್ಕಾರ ಹೆದರುತ್ತಿದೆ ಎಂದು ವ್ಯಂಗ್ಯವಾಡಿದರು.





