ನವದೆಹಲಿ: ಈ ಬಾರಿಯ ಲೋಕಸಭೆ ಚುನಾವಣೆ ಯಲ್ಲಿ ಇಂಡಿಯಾ ಮೈತ್ರಿಕೂಟದ ಹೋರಾಟಕ್ಕೆ ಜನಮನ್ನಣೆ ಸಿಕ್ಕಿದೆ. ಇದು ಅಧಿಕಾರ ಶಾಹಿತ್ವದ ವಿರುದ್ಧದ ಹೋರಾಟವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದ ಜನರು ದೇಶದ ರಾಜಕೀಯ ಮತ್ತು ಸಂವಿಧಾನದ ಅಪಾಯವನ್ನು ಅರ್ಥಮಾಡಿಕೊಂಡಿದ್ದು, ಸಂವಿಧಾನವನ್ನು ರಕ್ಷಿಸಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತು ಇಂಡಿಯಾ ಮೈತ್ರಿಕೂಟವನ್ನು ಬೆಂಬಲಿಸಿದ್ದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ. ಇಂಡಿಯಾ ಮೈತ್ರಿ ಕೂಟದ ಹೋರಾಟಕ್ಕೆ ಮನ್ನಣೆ ನೀಡಿದ ದೇಶದ ಜನತೆಗೆ ಧನ್ಯವಾದ ಎಂದು ತಿಳಿಸಿದರು.
ಇಂಡಿಯಾ ಮೈತ್ರಿಕೂಟದಿಂದ ಸರ್ಕಾರ ರಚನೆಯ ಸಾಧ್ಯತೆಗಳ ಪ್ರಶ್ನೆಗೆ ಉತ್ತರಿಸಿದ ರಾಹುಲ್, ಪಾಲುದಾರರೊಂದಿಗೆ ಇಂದು ಸಭೆ ನಡೆಸುತ್ತೇವೆ. ಮೈತ್ರಿ ಪಾಲುದಾರರನ್ನು ಗೌರವಿಸುತ್ತೇವೆ. ಅವರನ್ನು ಕೇಳದೆ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಹೇಳಿದರು.
ದೇಶದಲ್ಲಿ ಸಂವಿಧಾನ ಉಳಿಸಲು ಹೋರಾಟ ಮಾಡಬೇಕಿತ್ತು. ಸಂವಿಧಾನ ಉಳಿಸುವ ನಿಟ್ಟಿನಲ್ಲಿ ಜನರು ಮೊದಲ ಹೆಜ್ಜೆ ಇಟ್ಟಿದ್ದಾರೆ. ಬಿಜೆಪಿಯವರು ಟಿಡಿಪಿ ಮತ್ತು ಜೆಡಿಯು ಆಸರೆಯಲ್ಲಿ ನಿಂತಿದ್ದಾರೆ. ನಾವು ಈಗಲೇ ಯಾವುದನ್ನೂ ನಿರ್ಧಾರ ಮಾಡುವುದಿಲ್ಲ ಎಂದಿದ್ದಾರೆ.
ಬುಧವಾರ ಇಂಡಿಯಾ ಕೂಟದ ಮಿತ್ರ ಪಕ್ಷಗಳ ಸಭೆ ಇದ್ದು, ಅವರ ಜತೆ ಚರ್ಚಿಸಿದ ನಂತರ ವಷ್ಟೇ ನಾವು ಸರ್ಕಾರ ರಚನೆ ಮಾಡುತ್ತೇವೋ, ಇಲ್ಲವೋ ಎಂಬುದನ್ನು ಹೇಳುತ್ತೇವೆ. ಇಂಡಿಯಾ ಮೈತ್ರಿ ಕೂಟದ ಮಿತ್ರ ಪಕ್ಷಗಳ ಹೋರಾಟಕ್ಕೆ ಜನಮನ್ನಣೆ ಸಿಕ್ಕಿದೆ. ಬಿಜೆಪಿ ನೇತೃತ್ವದ ಆಡಳಿತಾರೂಢ ಎನ್ಡಿಎಗೆ ಹಿನ್ನಡೆಯಾಗುವ ಮೂಲಕ ಜನರ ವಿಶ್ವಾಸ ಕಳೆದುಕೊಂಡಿದೆ ಎಂದರು.
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…