ನವದೆಹಲಿ: ಈ ಬಾರಿಯ ಲೋಕಸಭೆ ಚುನಾವಣೆ ಯಲ್ಲಿ ಇಂಡಿಯಾ ಮೈತ್ರಿಕೂಟದ ಹೋರಾಟಕ್ಕೆ ಜನಮನ್ನಣೆ ಸಿಕ್ಕಿದೆ. ಇದು ಅಧಿಕಾರ ಶಾಹಿತ್ವದ ವಿರುದ್ಧದ ಹೋರಾಟವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದ ಜನರು ದೇಶದ ರಾಜಕೀಯ ಮತ್ತು ಸಂವಿಧಾನದ ಅಪಾಯವನ್ನು ಅರ್ಥಮಾಡಿಕೊಂಡಿದ್ದು, ಸಂವಿಧಾನವನ್ನು ರಕ್ಷಿಸಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತು ಇಂಡಿಯಾ ಮೈತ್ರಿಕೂಟವನ್ನು ಬೆಂಬಲಿಸಿದ್ದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ. ಇಂಡಿಯಾ ಮೈತ್ರಿ ಕೂಟದ ಹೋರಾಟಕ್ಕೆ ಮನ್ನಣೆ ನೀಡಿದ ದೇಶದ ಜನತೆಗೆ ಧನ್ಯವಾದ ಎಂದು ತಿಳಿಸಿದರು.
ಇಂಡಿಯಾ ಮೈತ್ರಿಕೂಟದಿಂದ ಸರ್ಕಾರ ರಚನೆಯ ಸಾಧ್ಯತೆಗಳ ಪ್ರಶ್ನೆಗೆ ಉತ್ತರಿಸಿದ ರಾಹುಲ್, ಪಾಲುದಾರರೊಂದಿಗೆ ಇಂದು ಸಭೆ ನಡೆಸುತ್ತೇವೆ. ಮೈತ್ರಿ ಪಾಲುದಾರರನ್ನು ಗೌರವಿಸುತ್ತೇವೆ. ಅವರನ್ನು ಕೇಳದೆ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಹೇಳಿದರು.
ದೇಶದಲ್ಲಿ ಸಂವಿಧಾನ ಉಳಿಸಲು ಹೋರಾಟ ಮಾಡಬೇಕಿತ್ತು. ಸಂವಿಧಾನ ಉಳಿಸುವ ನಿಟ್ಟಿನಲ್ಲಿ ಜನರು ಮೊದಲ ಹೆಜ್ಜೆ ಇಟ್ಟಿದ್ದಾರೆ. ಬಿಜೆಪಿಯವರು ಟಿಡಿಪಿ ಮತ್ತು ಜೆಡಿಯು ಆಸರೆಯಲ್ಲಿ ನಿಂತಿದ್ದಾರೆ. ನಾವು ಈಗಲೇ ಯಾವುದನ್ನೂ ನಿರ್ಧಾರ ಮಾಡುವುದಿಲ್ಲ ಎಂದಿದ್ದಾರೆ.
ಬುಧವಾರ ಇಂಡಿಯಾ ಕೂಟದ ಮಿತ್ರ ಪಕ್ಷಗಳ ಸಭೆ ಇದ್ದು, ಅವರ ಜತೆ ಚರ್ಚಿಸಿದ ನಂತರ ವಷ್ಟೇ ನಾವು ಸರ್ಕಾರ ರಚನೆ ಮಾಡುತ್ತೇವೋ, ಇಲ್ಲವೋ ಎಂಬುದನ್ನು ಹೇಳುತ್ತೇವೆ. ಇಂಡಿಯಾ ಮೈತ್ರಿ ಕೂಟದ ಮಿತ್ರ ಪಕ್ಷಗಳ ಹೋರಾಟಕ್ಕೆ ಜನಮನ್ನಣೆ ಸಿಕ್ಕಿದೆ. ಬಿಜೆಪಿ ನೇತೃತ್ವದ ಆಡಳಿತಾರೂಢ ಎನ್ಡಿಎಗೆ ಹಿನ್ನಡೆಯಾಗುವ ಮೂಲಕ ಜನರ ವಿಶ್ವಾಸ ಕಳೆದುಕೊಂಡಿದೆ ಎಂದರು.
ಬೆಂಗಳೂರು : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ಶುಕ್ರವಾರ ಗ್ರಾಮ್ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ…
ಬೆಂಗಳೂರು : ಖ್ಯಾತ ಉದ್ಯಮಿ ಮತ್ತು ಕಾನ್ಛಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ…
ಮೈಸೂರು : ನಗರದಲ್ಲಿ ಕೋಟ್ಯಾಂತರ ರೂ. ಮೊತ್ತದ ಡ್ರಗ್ಸ್ ತಯಾರಿಕೆ ನಡೆಯುತ್ತಿದ್ದರೂ ಪತ್ತೆ ಹಚ್ಚುವಲ್ಲಿ ನಗರದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ…
ಮುಂಬೈ : ಮಹಾರಾಷ್ಟ್ರದ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣ. ಎನ್ಸಿಪಿ ನಾಯಕಿ ದಿ.ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್…
ಹನೂರು : ದಂಟಳ್ಳಿ ಏತ ನೀರಾವರಿ ಯೋಜನೆಗೆ ಡಿ.ಪಿ.ಆರ್ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಯುವ…
ಮೈಸೂರು : ಮೈಸೂರಿನಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಸುಮಾರು 10 ಕೋಟಿ ರೂ. ಮೌಲ್ಯದ…