ನವದೆಹಲಿ: ಈ ಬಾರಿಯ ಲೋಕಸಭೆ ಚುನಾವಣೆ ಯಲ್ಲಿ ಇಂಡಿಯಾ ಮೈತ್ರಿಕೂಟದ ಹೋರಾಟಕ್ಕೆ ಜನಮನ್ನಣೆ ಸಿಕ್ಕಿದೆ. ಇದು ಅಧಿಕಾರ ಶಾಹಿತ್ವದ ವಿರುದ್ಧದ ಹೋರಾಟವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದ ಜನರು ದೇಶದ ರಾಜಕೀಯ ಮತ್ತು ಸಂವಿಧಾನದ ಅಪಾಯವನ್ನು ಅರ್ಥಮಾಡಿಕೊಂಡಿದ್ದು, ಸಂವಿಧಾನವನ್ನು ರಕ್ಷಿಸಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತು ಇಂಡಿಯಾ ಮೈತ್ರಿಕೂಟವನ್ನು ಬೆಂಬಲಿಸಿದ್ದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ. ಇಂಡಿಯಾ ಮೈತ್ರಿ ಕೂಟದ ಹೋರಾಟಕ್ಕೆ ಮನ್ನಣೆ ನೀಡಿದ ದೇಶದ ಜನತೆಗೆ ಧನ್ಯವಾದ ಎಂದು ತಿಳಿಸಿದರು.
ಇಂಡಿಯಾ ಮೈತ್ರಿಕೂಟದಿಂದ ಸರ್ಕಾರ ರಚನೆಯ ಸಾಧ್ಯತೆಗಳ ಪ್ರಶ್ನೆಗೆ ಉತ್ತರಿಸಿದ ರಾಹುಲ್, ಪಾಲುದಾರರೊಂದಿಗೆ ಇಂದು ಸಭೆ ನಡೆಸುತ್ತೇವೆ. ಮೈತ್ರಿ ಪಾಲುದಾರರನ್ನು ಗೌರವಿಸುತ್ತೇವೆ. ಅವರನ್ನು ಕೇಳದೆ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಹೇಳಿದರು.
ದೇಶದಲ್ಲಿ ಸಂವಿಧಾನ ಉಳಿಸಲು ಹೋರಾಟ ಮಾಡಬೇಕಿತ್ತು. ಸಂವಿಧಾನ ಉಳಿಸುವ ನಿಟ್ಟಿನಲ್ಲಿ ಜನರು ಮೊದಲ ಹೆಜ್ಜೆ ಇಟ್ಟಿದ್ದಾರೆ. ಬಿಜೆಪಿಯವರು ಟಿಡಿಪಿ ಮತ್ತು ಜೆಡಿಯು ಆಸರೆಯಲ್ಲಿ ನಿಂತಿದ್ದಾರೆ. ನಾವು ಈಗಲೇ ಯಾವುದನ್ನೂ ನಿರ್ಧಾರ ಮಾಡುವುದಿಲ್ಲ ಎಂದಿದ್ದಾರೆ.
ಬುಧವಾರ ಇಂಡಿಯಾ ಕೂಟದ ಮಿತ್ರ ಪಕ್ಷಗಳ ಸಭೆ ಇದ್ದು, ಅವರ ಜತೆ ಚರ್ಚಿಸಿದ ನಂತರ ವಷ್ಟೇ ನಾವು ಸರ್ಕಾರ ರಚನೆ ಮಾಡುತ್ತೇವೋ, ಇಲ್ಲವೋ ಎಂಬುದನ್ನು ಹೇಳುತ್ತೇವೆ. ಇಂಡಿಯಾ ಮೈತ್ರಿ ಕೂಟದ ಮಿತ್ರ ಪಕ್ಷಗಳ ಹೋರಾಟಕ್ಕೆ ಜನಮನ್ನಣೆ ಸಿಕ್ಕಿದೆ. ಬಿಜೆಪಿ ನೇತೃತ್ವದ ಆಡಳಿತಾರೂಢ ಎನ್ಡಿಎಗೆ ಹಿನ್ನಡೆಯಾಗುವ ಮೂಲಕ ಜನರ ವಿಶ್ವಾಸ ಕಳೆದುಕೊಂಡಿದೆ ಎಂದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…