ದೇಶ- ವಿದೇಶ

ಬಿಜೆಪಿ ಮನುಸ್ಮೃತಿಯನ್ನು ಸಂವಿಧಾನಕ್ಕಿಂತ ಉನ್ನತ ಸ್ಥಾನದಲ್ಲಿ ಪರಿಗಣಿಸುತ್ತಿದೆ: ರಾಹುಲ್‌ ಗಾಂಧಿ

ನವದೆಹಲಿ: ಬಿಜೆಪಿ ಸರ್ಕಾರ ಮನುಸ್ಮೃತಿಯನ್ನು ಸಂವಿಧಾನಕ್ಕಿಂತಲೂ ಉನ್ನತ ಸ್ಥಾನದಲ್ಲಿ ಪರಿಗಣಿಸುಲಾತ್ತಿದೆಯೆಂದು ಸಂಸತ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಇಂದು ಡಿಸೆಂಬರ್‌.14 ರಂದು ಸಂಸತ್‌ ಅಧಿವೇಶನದಲ್ಲಿ ಮಾತನಾಡಿದ ಅವರು, ನಮ್ಮ ದೇಶ ಸಂವಿಧಾನವನ್ನು ಅಳವಡಿಸಿಕೊಂಡು 75 ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಇಂದಿನ ಅಧಿವೇಶನಗಳಲ್ಲಿ ಸಂವಿಧಾನ ಬಗ್ಗೆ ಚರ್ಚೆಗಳಾಗುತ್ತಿವೆ. ಆದರೆ ಕೇಂದ್ರ ಸರ್ಕಾರ ಯುವಕರ ನಿರೀಕ್ಷೆಗಳಿಗೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿಲ್ಲ. ಕೇವಲ ಮನುಸ್ಮೃತಿ ತತ್ವವನ್ನು ಆಚರಣೆ ಮಾಡುತ್ತಿದೆ ಎಂದು ಮಹಾಭಾರತದ ಕಥೆಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇನ್ನು ಮಹಾಭಾರತದಲ್ಲೂ ಜಾತಿ ಪದ್ಧತಿ ರೂಢಿಯಲ್ಲಿತ್ತು. ದ್ರೋಣಾಚಾರ್ಯರೇ ಗುರು ದಕ್ಷಿಣೆಗಾಗಿ ಏಕಲವ್ಯನಿಂದ ಹೆಬ್ಬೆರಳನ್ನು ಕತ್ತರಿಸಿಕೊಡುವಂತೆ ಹೇಳಿದಂತೆಯೇ, ಇದೀಗ ಕೇಂದ್ರ ಸರ್ಕಾರ ಭಾರತದ ಯುವಕರ ಹೆಬ್ಬೆರಳನ್ನು ಕತ್ತರಿಸುವಂತಹ ಕಾರ್ಯ ಮಾಡುತ್ತಿದೆ. ಅಲ್ಲದೇ ಎಲ್ಲವನ್ನೂ ಅದಾನಿ ಸೇರಿದಂತೆ ಇನ್ನಿತರ ಕೈಗಾರಿಕೋದ್ಯಮಿಗಳ ಕೈಗೆ ನೀಡಿ ಯುವಕರ ಜೀವನವನ್ನು ಹಾಳು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಹಾಪಂಚ್ ಕಾರ್ಟೂನ್

ಮಹಾಪಂಚ್ ಕಾರ್ಟೂನ್ | ಡಿಸೆಂಬರ್ 13 ಶನಿವಾರ  

7 mins ago

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

13 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

13 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

14 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

14 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

14 hours ago