ನವದೆಹಲಿ: ಬಿಜೆಪಿ ಸರ್ಕಾರ ಮನುಸ್ಮೃತಿಯನ್ನು ಸಂವಿಧಾನಕ್ಕಿಂತಲೂ ಉನ್ನತ ಸ್ಥಾನದಲ್ಲಿ ಪರಿಗಣಿಸುಲಾತ್ತಿದೆಯೆಂದು ಸಂಸತ್ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಇಂದು ಡಿಸೆಂಬರ್.14 ರಂದು ಸಂಸತ್ ಅಧಿವೇಶನದಲ್ಲಿ ಮಾತನಾಡಿದ ಅವರು, ನಮ್ಮ ದೇಶ ಸಂವಿಧಾನವನ್ನು ಅಳವಡಿಸಿಕೊಂಡು 75 ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಇಂದಿನ ಅಧಿವೇಶನಗಳಲ್ಲಿ ಸಂವಿಧಾನ ಬಗ್ಗೆ ಚರ್ಚೆಗಳಾಗುತ್ತಿವೆ. ಆದರೆ ಕೇಂದ್ರ ಸರ್ಕಾರ ಯುವಕರ ನಿರೀಕ್ಷೆಗಳಿಗೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿಲ್ಲ. ಕೇವಲ ಮನುಸ್ಮೃತಿ ತತ್ವವನ್ನು ಆಚರಣೆ ಮಾಡುತ್ತಿದೆ ಎಂದು ಮಹಾಭಾರತದ ಕಥೆಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಇನ್ನು ಮಹಾಭಾರತದಲ್ಲೂ ಜಾತಿ ಪದ್ಧತಿ ರೂಢಿಯಲ್ಲಿತ್ತು. ದ್ರೋಣಾಚಾರ್ಯರೇ ಗುರು ದಕ್ಷಿಣೆಗಾಗಿ ಏಕಲವ್ಯನಿಂದ ಹೆಬ್ಬೆರಳನ್ನು ಕತ್ತರಿಸಿಕೊಡುವಂತೆ ಹೇಳಿದಂತೆಯೇ, ಇದೀಗ ಕೇಂದ್ರ ಸರ್ಕಾರ ಭಾರತದ ಯುವಕರ ಹೆಬ್ಬೆರಳನ್ನು ಕತ್ತರಿಸುವಂತಹ ಕಾರ್ಯ ಮಾಡುತ್ತಿದೆ. ಅಲ್ಲದೇ ಎಲ್ಲವನ್ನೂ ಅದಾನಿ ಸೇರಿದಂತೆ ಇನ್ನಿತರ ಕೈಗಾರಿಕೋದ್ಯಮಿಗಳ ಕೈಗೆ ನೀಡಿ ಯುವಕರ ಜೀವನವನ್ನು ಹಾಳು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…