ಕೇರಳ: ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ಲೋಕಸಭಾ ಚುನಾವಣೆಗೂ ಮುನ್ನವೇ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಹುಲ್ ಗಾಂಧಿ ಪರ ವಯನಾಡಿಯಲ್ಲಿ ಪ್ರಚಾರ ಮಾಡಲು ಬಂದಿದ್ದ ರೇವಂತ್ ರೆಡ್ಡಿ ಎಎನ್ಐ ಜತೆ ಮಾತನಾಡುತ್ತಾ ವಾರಣಾಸಿ ಸಂಸದರು 10ವರ್ಷ ಪ್ರಧಾನಿಯಾಗಿದ್ದರು, ಇದೀಗ ವಯನಾಡಿನ ಸಂಸದ ರಾಹುಲ್ ಗಾಂಧಿ ಮುಂದಿನ 20 ವರ್ಷ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿದರು.
ದೇಶದಲ್ಲಿ ಬಿಜೆಪಿ ವಿದ್ಯುನ್ಮಾನ ಮತಯಂತ್ರಗಳ ಮೇಲೆ ಚುನಾವಣೆ ನಡೆಸುತ್ತಿದೆ ಎಂದು ವಿದ್ಯುನ್ಮಾನ ಮತಯಂತ್ರಗಳ ಮೇಲೆ ಅನುಮಾನ ವ್ಯಕ್ತಪಡಿಸಿದ ಅವರು ಬಿಜೆಪಿ ಬ್ಯಾಲೇಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಏಕೆ ಭಯ ಪಡುತ್ತದೆ ಎಂದು ಪ್ರಶ್ನಿಸಿದರು.
ದಕ್ಷಿಣ ಭಾರತದ ಜನರ ಮತ ಕೇಳಲು ಮೋದಿಗೆ ಹಕ್ಕಿಲ್ಲ. ದಕ್ಷಿಣಕ್ಕೆ ನೀವು ಏನು ಕೊಟ್ಟಿದ್ದೀರಾ, ನಮಗೆ ಬುಲೆಟ್ ಟ್ರೈನ್ ಕೊಟ್ಟಿಲ್ಲ, ದೇವಾಲಯ ಕಾರಿಡಾಲರ್ ಕೊಟ್ಟಿಲ್ಲ, ಮಂತ್ರಿಮಂಡಲದ ಪ್ರಬಲ ಖಾತೆ ಕೊಟ್ಟಿಲ್ಲ, ಎಲ್ಲವನ್ನು ಉತ್ತರ ಭಾರತಕ್ಕೆ ಕೋಟಿದ್ದೀರಿ, ಇದೀಗ ಚುನಾವಣೆ ಬಂದಾಗಿ ಕೇವಲ ಮತಕ್ಕಾಗಿ ದಕ್ಷಿಣದ ಜನರನ್ನು ನೆನಪಿಸಿಕೊಳ್ಳುತ್ತೀರ ಎಂದು ಟೀಕಿಸಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…