ಕೇರಳ: ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ಲೋಕಸಭಾ ಚುನಾವಣೆಗೂ ಮುನ್ನವೇ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಹುಲ್ ಗಾಂಧಿ ಪರ ವಯನಾಡಿಯಲ್ಲಿ ಪ್ರಚಾರ ಮಾಡಲು ಬಂದಿದ್ದ ರೇವಂತ್ ರೆಡ್ಡಿ ಎಎನ್ಐ ಜತೆ ಮಾತನಾಡುತ್ತಾ ವಾರಣಾಸಿ ಸಂಸದರು 10ವರ್ಷ ಪ್ರಧಾನಿಯಾಗಿದ್ದರು, ಇದೀಗ ವಯನಾಡಿನ ಸಂಸದ ರಾಹುಲ್ ಗಾಂಧಿ ಮುಂದಿನ 20 ವರ್ಷ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿದರು.
ದೇಶದಲ್ಲಿ ಬಿಜೆಪಿ ವಿದ್ಯುನ್ಮಾನ ಮತಯಂತ್ರಗಳ ಮೇಲೆ ಚುನಾವಣೆ ನಡೆಸುತ್ತಿದೆ ಎಂದು ವಿದ್ಯುನ್ಮಾನ ಮತಯಂತ್ರಗಳ ಮೇಲೆ ಅನುಮಾನ ವ್ಯಕ್ತಪಡಿಸಿದ ಅವರು ಬಿಜೆಪಿ ಬ್ಯಾಲೇಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಏಕೆ ಭಯ ಪಡುತ್ತದೆ ಎಂದು ಪ್ರಶ್ನಿಸಿದರು.
ದಕ್ಷಿಣ ಭಾರತದ ಜನರ ಮತ ಕೇಳಲು ಮೋದಿಗೆ ಹಕ್ಕಿಲ್ಲ. ದಕ್ಷಿಣಕ್ಕೆ ನೀವು ಏನು ಕೊಟ್ಟಿದ್ದೀರಾ, ನಮಗೆ ಬುಲೆಟ್ ಟ್ರೈನ್ ಕೊಟ್ಟಿಲ್ಲ, ದೇವಾಲಯ ಕಾರಿಡಾಲರ್ ಕೊಟ್ಟಿಲ್ಲ, ಮಂತ್ರಿಮಂಡಲದ ಪ್ರಬಲ ಖಾತೆ ಕೊಟ್ಟಿಲ್ಲ, ಎಲ್ಲವನ್ನು ಉತ್ತರ ಭಾರತಕ್ಕೆ ಕೋಟಿದ್ದೀರಿ, ಇದೀಗ ಚುನಾವಣೆ ಬಂದಾಗಿ ಕೇವಲ ಮತಕ್ಕಾಗಿ ದಕ್ಷಿಣದ ಜನರನ್ನು ನೆನಪಿಸಿಕೊಳ್ಳುತ್ತೀರ ಎಂದು ಟೀಕಿಸಿದರು.
ಡಾ.ಪ್ರಮೀಳಾದೇವಿ ಬಿ.ಕೆ ಖಾದಿಯಿಂದ ದೇಶವನ್ನು ಒಂದು ಗೂಡಿಸುವುದು ಸಾಧ್ಯವೇ? ಇಂದು ಸಾಮಾನ್ಯವಾಗಿ ಕೇಳಬಹುದಾದ ಪ್ರಶ್ನೆ. ಸ್ವಾತಂತ್ರ್ಯ ಬಂದು ಏಳು ದಶಕ…
ಜಹಜಿನಲ್ಲಿ ನನಗೆ ಸಮುದ್ರ ಪ್ರಯಾಣದ ಯಾವ ತೊಂದರೆಯೂ ಆಗಲಿಲ್ಲ. ದಿನಗಳು ಕಳೆದಂತೆಲ್ಲ ನನ್ನ ಮನಸ್ಸು ಸಂದಿಗ್ಧ ಪರಿಸ್ಥಿತಿಗೆ ಬೀಳತೊಡಗಿದ್ದಿತು. ಹಡಗಿನ…
ವಸಂತ್ ಕುಮಾರ್, ಮೈಸೂರು ಮಠ ಪ್ರತಿ ವರ್ಷವೂ ಪಾಲಿಕೆಯ ಬಜೆಟ್ನಲ್ಲಿ ರಸ್ತೆ ದುರಸ್ತಿಗಾಗಿ ಇಂತಿಷ್ಟು ಹಣವನ್ನು ನಿಗದಿಪಡಿಸಲಾಗುತ್ತದೆ. ೨೦೨೪-೨೦೨೫ರಲ್ಲಿ ಕೊಟ್ಟ…
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…