ಕೇರಳ: ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ಲೋಕಸಭಾ ಚುನಾವಣೆಗೂ ಮುನ್ನವೇ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಹುಲ್ ಗಾಂಧಿ ಪರ ವಯನಾಡಿಯಲ್ಲಿ ಪ್ರಚಾರ ಮಾಡಲು ಬಂದಿದ್ದ ರೇವಂತ್ ರೆಡ್ಡಿ ಎಎನ್ಐ ಜತೆ ಮಾತನಾಡುತ್ತಾ ವಾರಣಾಸಿ ಸಂಸದರು 10ವರ್ಷ ಪ್ರಧಾನಿಯಾಗಿದ್ದರು, ಇದೀಗ ವಯನಾಡಿನ ಸಂಸದ ರಾಹುಲ್ ಗಾಂಧಿ ಮುಂದಿನ 20 ವರ್ಷ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿದರು.
ದೇಶದಲ್ಲಿ ಬಿಜೆಪಿ ವಿದ್ಯುನ್ಮಾನ ಮತಯಂತ್ರಗಳ ಮೇಲೆ ಚುನಾವಣೆ ನಡೆಸುತ್ತಿದೆ ಎಂದು ವಿದ್ಯುನ್ಮಾನ ಮತಯಂತ್ರಗಳ ಮೇಲೆ ಅನುಮಾನ ವ್ಯಕ್ತಪಡಿಸಿದ ಅವರು ಬಿಜೆಪಿ ಬ್ಯಾಲೇಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಏಕೆ ಭಯ ಪಡುತ್ತದೆ ಎಂದು ಪ್ರಶ್ನಿಸಿದರು.
ದಕ್ಷಿಣ ಭಾರತದ ಜನರ ಮತ ಕೇಳಲು ಮೋದಿಗೆ ಹಕ್ಕಿಲ್ಲ. ದಕ್ಷಿಣಕ್ಕೆ ನೀವು ಏನು ಕೊಟ್ಟಿದ್ದೀರಾ, ನಮಗೆ ಬುಲೆಟ್ ಟ್ರೈನ್ ಕೊಟ್ಟಿಲ್ಲ, ದೇವಾಲಯ ಕಾರಿಡಾಲರ್ ಕೊಟ್ಟಿಲ್ಲ, ಮಂತ್ರಿಮಂಡಲದ ಪ್ರಬಲ ಖಾತೆ ಕೊಟ್ಟಿಲ್ಲ, ಎಲ್ಲವನ್ನು ಉತ್ತರ ಭಾರತಕ್ಕೆ ಕೋಟಿದ್ದೀರಿ, ಇದೀಗ ಚುನಾವಣೆ ಬಂದಾಗಿ ಕೇವಲ ಮತಕ್ಕಾಗಿ ದಕ್ಷಿಣದ ಜನರನ್ನು ನೆನಪಿಸಿಕೊಳ್ಳುತ್ತೀರ ಎಂದು ಟೀಕಿಸಿದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…