ದೇಶ- ವಿದೇಶ

ವಯನಾಡ್‌ ಅಥವಾ ರಾಯ್‌ಬರೇಲಿ?: ಮೂರ್ನಾಲ್ಕು ದಿನಗಳಲ್ಲಿ ರಾಗಾ ತೀರ್ಮಾನ!

ನವದೆಹಲಿ: ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ. ತಾವು ಪ್ರತಿನಿಧಿಸಿರುವ ಈ ಎರಡು ಕ್ಷೇತ್ರಗಳಲ್ಲಿ ಯಾವುದನ್ನು ಪ್ರತಿನಿಧಿಸಲಿದ್ದಾರೆ ಎಂಬುದನ್ನು ಮುಂದಿನ ಮೂರ್ನಾಲ್ಕು ದಿನಗಳಲ್ಲಿ ನಿರ್ಧರಿಸಲಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷದ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಅವರು ತಿಳಿಸಿದ್ದಾರೆ.

ನವದೆಹಲಿಯಲ್ಲಿ ಇಂದು (ಜೂನ್‌.8) ನಡೆದ ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆಯ ನಂತರ ಮಾತನಾಡಿದ ವೇಣುಗೋಪಾಲ್‌, ಯಾವುದೇ ಸಂದರ್ಭದಲ್ಲಿಯೂ ಸಹಾ ಇದೇ ಜೂನ್‌.17ರ ಒಳಗಾಗಿ ರಾಹುಲ್‌ ಗಾಂಧಿ ತಮ್ಮ ತೀರ್ಮಾನವನ್ನು ಪ್ರಕಟಿಸಲಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ರಾಹುಲ್‌ ಗಾಂಧಿ ಸತತ ಎರಡನೇ ಅವಧಿಗೆ ಕೇರಳದಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ. ಇತ್ತ ತಮ್ಮ ತಾಯಿ ಕ್ಷೇತ್ರ ರಾಯ್‌ಬರೇಲಿಯಲ್ಲಿ ಮೊದಲ ಬಾರಿ ಸ್ಪರ್ಧೆ ಮಾಡಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ ತಮ್ಮ ಅಂತಿಮ ನಿರ್ಧಾರವನ್ನು ಖಚಿತವಾಗಿ ತಿಳಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಭಾರತೀಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ವ್ಯಕ್ತಿ ಗರಿಷ್ಠ ಎರಡು ಕ್ಷೇತ್ರಗಳಲ್ಲಿ ನಿಲ್ಲಬಹುದಾಗಿದೆ. ಎರಡನ್ನೂ ಗೆದ್ದಲ್ಲಿ ಒಂದು ಪಕ್ಷವನ್ನು ಕೈಬಿಡಬೇಕಾಗುತ್ತದೆ. ಪರಿಣಾಮವಾಗಿ ತೆರವಾದ ಕ್ಷೇತ್ರಕ್ಕೆ ಉಪಚುನಾವಣೆ ನಡೆಸಲಾಗುತ್ತದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಟಿ-20 ವಿಶ್ವಕಪ್ | ಇಂದು ಭಾರತ-ಪಾಕ್‌ ಹಣಾಹಣಿ

ಕೊಲಂಬೋ : ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಭಾನುವಾರ (ಫೆ.15) ಸಂಜೆ ನಡೆಯುವ ರಣರೋಚಕ ಪಂದ್ಯಕ್ಕೆ ಜಗತ್ತಿನಾದ್ಯಂತ ಕ್ರಿಕೆಟ್…

16 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆ.15 ಭಾನುವಾರ

45 mins ago

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

12 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

12 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

12 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

12 hours ago