ನವದೆಹಲಿ: ಭಾರತ್ ಜೋಡೋ ಯಾತ್ರೆಯ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತೀಯ ಸೇನೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಜನರು ಭಾರತ್ ಜೋಡೋ ಯಾತ್ರೆ ಬಗ್ಗೆ ಕೇಳುತ್ತಾರೆ. ಆದರೆ ಚೀನಾ 2000 ಚದರ ಕಿಲೋ ಮೀಟರ್ ಭಾರತೀಯ ಭೂಮಿಯನ್ನು ವಶಪಡಿಸಿಕೊಂಡು, 20 ಭಾರತೀಯ ಸೈನಿಕರನ್ನು ಕೊಂದು, ಅರುಣಾಚಲ ಪ್ರದೇಶದಲ್ಲಿ ನಮ್ಮ ಸೈನಿಕರನ್ನು ಥಳಿಸುವುದರ ಬಗ್ಗೆ ಒಂದೇ ಒಂದು ಪ್ರಶ್ನೆಯನ್ನೂ ಕೇಳುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದರು.
ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ನಾಯಕರು ಕೆಂಡಾಮಂಡಲರಾಗಿದ್ದು, ರಾಗಾ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.





