ದೇಶ- ವಿದೇಶ

ಯಾವುದೇ ಬೆಲೆ ತೆತ್ತಾದರೂ ಸಂವಿಧಾನ ಹಾಗೂ ಮೀಸಲಾತಿ ವ್ಯವಸ್ಥೆ ರಕ್ಷಣೆ ಮಾಡುತ್ತೇವೆ: ರಾಹುಲ್‌ ಗಾಂಧಿ

ನವದೆಹಲಿ: ಖಾಸಗಿಯವರಿಗೆ ಅವಕಾಶ ಮಾಡಿಕೊಡಲು ಲ್ಯಾಟರಲ್‌ ಎಂಟ್ರಿಯ ಜಾಹೀರಾತನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ ಅವರು, ನಾವು ಯಾವುದೇ ಬೆಲೆ ತೆತ್ತಾದರೂ ಸಂವಿಧಾನ ಹಾಗೂ ಮೀಸಲಾತಿ ವ್ಯವಸ್ಥೆಯನ್ನು ರಕ್ಷಣೆ ಮಾಡುತ್ತೇವೆ. ಲ್ಯಾಟರಲ್‌ ಎಂಟ್ರಿಯಂತಹ ಬಿಜೆಪಿಯ ಸಂಚನ್ನು ವಿಫಲಗೊಳಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶೇಕಡಾ 50ರ ಮೀಸಲಾತಿ ಮಿತಿಯನ್ನು ತೆರವುಗೊಳಿಸುವ ಮೂಲಕ ನಾವು ಜಾತಿ ಜನಗಣತಿಯ ಆಧಾರದ ಸಾಮಾಜಿಕ ನ್ಯಾಯವನ್ನು ಖಚಿತಪಡಿಸಲಿದ್ದೇವೆ. ನಾವು ಸಂವಿಧಾನ ಉಳಿಸಿಕೊಳ್ಳಲು ಹಗಲಿರುಳು ಶ್ರಮ ವಹಿಸುತ್ತೇವೆ. ಸಂವಿಧಾನ ಹಾಗೂ ಮೀಸಲಾತಿ ವ್ಯವಸ್ಥೆ ರಕ್ಷಣೆಯೇ ನಮ್ಮ ಮುಂದಿನ ಗುರಿ ಎಂದು ಭರವಸೆ ನೀಡಿದರು.

ಇನ್ನು ಸರ್ಕಾರದ ಉನ್ನತ ಹುದ್ದೆಗಳಿಗೆ ಲ್ಯಾಟರಲ್‌ ಎಂಟ್ರಿ ಮೂಲಕ ಖಾಸಗಿ ವಲಯದ ತಜ್ಞರು ಹಾಗೂ ಪರಿಣಿತರನ್ನು ನೇಮಕ ಮಾಡಿಕೊಳ್ಳುವುದಕ್ಕೆ ಕಾಂಗ್ರೆಸ್‌ ಹಾಗೂ ವಿಪಕ್ಷಗಳು ವಿರೋಧಿಸಿದ್ದವು. ಅಲ್ಲದೇ ಲ್ಯಾಟರಲ್‌ ಎಂಟ್ರಿ ಕ್ರಮವು ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯಗಳ ಮೀಸಲಾತಿಯನ್ನು ಕಸಿದುಕೊಳ್ಳುವ ನಡೆ ಎಂದು ಆರೋಪಿಸಿದ್ದವು.

ಆಗಸ್ಟ್.‌17ರಂದು ಯುಪಿಎಸ್‌ಸಿ 45 ಜಂಟಿ ಕಾರ್ಯದರ್ಶಿಗಳು, ನಿರ್ದೇಶಕರು ಮತ್ತು ಉಪಕಾರ್ಯದರ್ಶಿಗಳನ್ನು ಲ್ಯಾಟರಲ್‌ ಎಂಟ್ರಿ ಮೂಲಕ ನೇಮಕ ಮಾಡಲು ಅಧಿಸೂಚನೆಯನ್ನು ಹೊರಡಿಸಿತು.

ಇದನ್ನು ಸರ್ಕಾರಿ ಇಲಾಖೆಗಳಲ್ಲಿ ತಜ್ಞರ ನೇಮಕಾತಿ ಎಂದು ಉಲ್ಲೇಖಿಸಲಾಗುತ್ತದೆ. ಈ ನಿರ್ಧಾರವು ಒಬಿಸಿ, ಎಸ್‌ಸಿ ಮತ್ತು ಎಸ್‌ಟಿಗಳ ಮೀಸಲಾತಿ ಹಕ್ಕುಗಳನ್ನು ದುರ್ಬಲಗೊಳಿಸಿದೆ ಎಂದು ಪ್ರತಿಪಕ್ಷಗಳಿಂದ ಟೀಕೆಗೆ ಗುರಿಯಾಗಿತ್ತು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

4 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

4 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

4 hours ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

4 hours ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

4 hours ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

4 hours ago